<p><strong>ಸುಂಟಿಕೊಪ್ಪ:</strong> ಇಲ್ಲಿನ ಪೊಲೀಸ್ ಠಾಣೆಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ಸಂಬಂಧ ಶುಕ್ರವಾರ ಸಂಜೆ ಪೂರ್ವಭಾವಿ ಸಭೆ ನಡೆಯಿತು.</p>.<p>ಸಭೆಯಲ್ಲಿ ಚಂದ್ರಶೇಖರ್ ಮಾತನಾಡಿ, ‘ಪ್ರಕೃತಿ ವಿಕೋಪ ಸಂಭವಿಸುವ ಸಂದರ್ಭದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘2018ರಲ್ಲಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಸಂಭವಿಸಿದ ಭೂಕುಸಿತದ ಸಂದರ್ಭ ಇಲ್ಲಿನ ಬಹಳಷ್ಟು ಸಂಘಟನೆ ಸದಸ್ಯರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯಾಚರಣೆ ನಡೆಸಿದ್ದು ಎಲ್ಲರಿಗೆ ತಿಳಿದಿದೆ. ಈ ಬಾರಿಯೂ ಕೊಡಗಿನಲ್ಲಿ ಜೂನ್ ತಿಂಗಳಲ್ಲಿ ಅತ್ಯಧಿಕ ಮಳೆ ಬಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ತಮ್ಮಲ್ಲಿರುವ ಟ್ರಾಕ್ಟರ್, ಜೆಸಿಬಿ, ಕ್ರೇನ್, ಮರ ಕತ್ತರಿಸುವ ಯಂತ್ರಗಳು, ಆಂಬುಲೆನ್ಸ್, ವಾಹನಗಳ ಬಳಕೆಗೆ ಮಾಲೀಕರು ಕೈಜೋಡಿಸಬೇಕು’ ಎಂದು ಅವರು ಮನವಿ ಮಾಡಿದರು.</p>.<p>ಸಿಪಿಐ ದಿನೇಶ್ ಮಾತನಾಡಿ, ‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಅವಘಡಗಳು ಸಂಭವಿಸುವ ಸಮಯದಲ್ಲಿ ವಿಡಿಯೊ ಚಿತ್ರೀಕರಣ ಮಾಡದೇ ಅಪಾಯದಲ್ಲಿರುವವರನ್ನು ರಕ್ಷಿಸುವ ಜೊತೆಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿ’ ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಕುಟ್ಟಪ್ಪ, ರಫೀಕ್ ಖಾನ್, ಶಬೀರ್, ಬಿ.ಕೆ.ಪ್ರಶಾಂತ್ ಮಾತನಾಡಿ, ಇಲ್ಲಿನ ಪಂಪ್ಹೌಸ್ ರಸ್ತೆಯಲ್ಲಿರುವ ಬಡಾವಣೆಯು ಅಪಾಯದ ಅಂಚಿನಲ್ಲಿದ್ದು, ಈ ಭಾಗದಲ್ಲಿ ನೂರಾರು ಕುಟುಂಬಗಳು ನೆಲೆಸಿವೆ. ಅನಾಹುತ ಸಂಭವಿಸುವ ಮುನ್ನ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿ ಆಗ್ರಹಿಸಿದರು.</p>.<p>ಪಿಡಿಒ ವಿ.ಜಿ.ಲೋಕೇಶ್, ಅಧ್ಯಕ್ಷ ಪಿ.ಅರ್.ಸುನಿಲ್ ಕುಮಾರ್, ಪಿಎಸ್ಐ ಮೋಹನ್ ರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಇಲ್ಲಿನ ಪೊಲೀಸ್ ಠಾಣೆಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ಸಂಬಂಧ ಶುಕ್ರವಾರ ಸಂಜೆ ಪೂರ್ವಭಾವಿ ಸಭೆ ನಡೆಯಿತು.</p>.<p>ಸಭೆಯಲ್ಲಿ ಚಂದ್ರಶೇಖರ್ ಮಾತನಾಡಿ, ‘ಪ್ರಕೃತಿ ವಿಕೋಪ ಸಂಭವಿಸುವ ಸಂದರ್ಭದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘2018ರಲ್ಲಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಸಂಭವಿಸಿದ ಭೂಕುಸಿತದ ಸಂದರ್ಭ ಇಲ್ಲಿನ ಬಹಳಷ್ಟು ಸಂಘಟನೆ ಸದಸ್ಯರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯಾಚರಣೆ ನಡೆಸಿದ್ದು ಎಲ್ಲರಿಗೆ ತಿಳಿದಿದೆ. ಈ ಬಾರಿಯೂ ಕೊಡಗಿನಲ್ಲಿ ಜೂನ್ ತಿಂಗಳಲ್ಲಿ ಅತ್ಯಧಿಕ ಮಳೆ ಬಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ತಮ್ಮಲ್ಲಿರುವ ಟ್ರಾಕ್ಟರ್, ಜೆಸಿಬಿ, ಕ್ರೇನ್, ಮರ ಕತ್ತರಿಸುವ ಯಂತ್ರಗಳು, ಆಂಬುಲೆನ್ಸ್, ವಾಹನಗಳ ಬಳಕೆಗೆ ಮಾಲೀಕರು ಕೈಜೋಡಿಸಬೇಕು’ ಎಂದು ಅವರು ಮನವಿ ಮಾಡಿದರು.</p>.<p>ಸಿಪಿಐ ದಿನೇಶ್ ಮಾತನಾಡಿ, ‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಅವಘಡಗಳು ಸಂಭವಿಸುವ ಸಮಯದಲ್ಲಿ ವಿಡಿಯೊ ಚಿತ್ರೀಕರಣ ಮಾಡದೇ ಅಪಾಯದಲ್ಲಿರುವವರನ್ನು ರಕ್ಷಿಸುವ ಜೊತೆಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿ’ ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಕುಟ್ಟಪ್ಪ, ರಫೀಕ್ ಖಾನ್, ಶಬೀರ್, ಬಿ.ಕೆ.ಪ್ರಶಾಂತ್ ಮಾತನಾಡಿ, ಇಲ್ಲಿನ ಪಂಪ್ಹೌಸ್ ರಸ್ತೆಯಲ್ಲಿರುವ ಬಡಾವಣೆಯು ಅಪಾಯದ ಅಂಚಿನಲ್ಲಿದ್ದು, ಈ ಭಾಗದಲ್ಲಿ ನೂರಾರು ಕುಟುಂಬಗಳು ನೆಲೆಸಿವೆ. ಅನಾಹುತ ಸಂಭವಿಸುವ ಮುನ್ನ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿ ಆಗ್ರಹಿಸಿದರು.</p>.<p>ಪಿಡಿಒ ವಿ.ಜಿ.ಲೋಕೇಶ್, ಅಧ್ಯಕ್ಷ ಪಿ.ಅರ್.ಸುನಿಲ್ ಕುಮಾರ್, ಪಿಎಸ್ಐ ಮೋಹನ್ ರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>