<p><strong>ಸುಂಟಿಕೊಪ್ಪ</strong>: ಇಲ್ಲಿನ ಆಟೊ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸಂಘದ ಕಚೇರಿಯಲ್ಲಿ ರಕ್ತದಾನ ಶಿಬಿರ ನಡೆಯಿತು.</p>.<p>ಮಡಿಕೇರಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಮುಖ್ಯಸ್ಥ ಡಾ. ಕರುಂಬಯ್ಯ ಮಾತನಾಡಿ, ‘ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದ ಸಂಗ್ರಹ ಕಡಿಮೆ ಇದ್ದು, ಈ ನಿಟ್ಟಿನಲ್ಲಿ ಇಂತಹ ಶಿಬಿರಗಳು ಅತ್ಯಗತ್ಯ. ಮೂರು ತಿಂಗಳಿಗೊಮ್ಮೆ ದಾನಿಗಳು ರಕ್ತವನ್ನು ನೀಡುವ ಮೂಲಕ ಆರೋಗ್ಯವಂತರಾಗಿ ಬದುಕಲು ಮತ್ತು ಅನಾರೋಗ್ಯ ಪೀಡಿತರಿಗೆ ತುರ್ತಾಗಿ ರಕ್ತ ನೀಡಲು ಸಹಾಯವಾಗಲಿದೆ’ ಎಂದು ಹೇಳಿದರು.</p>.<p>‘ರೋಗಿಗಳಿಗೆ ರಕ್ತದ ಅವಶ್ಯಕತೆಯಿಂದ ನಿಮ್ಮ ಸಹಾಯ ಅತ್ಯಗತ್ಯವಾಗಿದೆ. ರಕ್ತ ನೀಡುವುದರಿಂದ ಯಾವುದೇ ಸಮಸ್ಯೆಗಳಿಲ್ಲ. ಹಾಗಾಗಿ ಉತ್ಸುಕರಾಗಿ ರಕ್ತದಾನ ಮಾಡಿದರೆ ಸ್ವಾಸ್ಥ್ಯ ಸಮಾಜಕ್ಕೆ ನಿರ್ಮಾಣಕ್ಕೆ ನಿಮ್ಮ ಕೊಡುಗೆ ಸಿಕ್ಕಿದಂತಾಗುತ್ತದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ, ‘ಇಂತಹ ಶಿಬಿರದಿಂದ ಸಾವಿರಾರು ಜನರ ಜೀವ ಉಳಿಸುವ ಭಾಗ್ಯ ಸಿಗಲಿದೆ. ಆ ಮೂಲಕ ಹೆಚ್ಚೆಚ್ಚು ದಾನಿಗಳು ರಕ್ತದಾನ ಮಾಡುವುದರ ಮೂಲಕ ಆರೋಗ್ಯ ಅನಾರೋಗ್ಯ ಪೀಡಿತರಿಗೆ ಆದಷ್ಟು ಬೇಗ ಅವರ ಸುಧಾರಣೆಗೆ ಸಹಕಾರಿಯಾಗಲಿದೆ’ ಎಂದು ಹೇಳಿದರು.</p>.<p>ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಶರೀಫ್ ಅಧ್ಯಕ್ಷತೆ ವಹಿಸಿದ್ದರು. 40ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.<br /> ಕಾರ್ಯದರ್ಶಿ ಸಚಿನ್, ಸಿ.ಸಿ.ಸುನಿಲ್, ವಿಶ್ವನಾಥ್, ನಾರಾಯಣ, ಅಶ್ರಫ್, ಕಲಂದರ್, ಮಡಿಕೇರಿ ವೈದ್ಯಕೀಯ ಮತ್ತು ವಿಜ್ಞಾನ ಕೇಂದ್ರದ ಕಾರ್ತಿಕ್, ಪೂರ್ಣಿಮಾ, ಸೌಮ್ಯ ಪಂಚಲಿಂಗೇಶ್ವರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ಇಲ್ಲಿನ ಆಟೊ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸಂಘದ ಕಚೇರಿಯಲ್ಲಿ ರಕ್ತದಾನ ಶಿಬಿರ ನಡೆಯಿತು.</p>.<p>ಮಡಿಕೇರಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಮುಖ್ಯಸ್ಥ ಡಾ. ಕರುಂಬಯ್ಯ ಮಾತನಾಡಿ, ‘ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದ ಸಂಗ್ರಹ ಕಡಿಮೆ ಇದ್ದು, ಈ ನಿಟ್ಟಿನಲ್ಲಿ ಇಂತಹ ಶಿಬಿರಗಳು ಅತ್ಯಗತ್ಯ. ಮೂರು ತಿಂಗಳಿಗೊಮ್ಮೆ ದಾನಿಗಳು ರಕ್ತವನ್ನು ನೀಡುವ ಮೂಲಕ ಆರೋಗ್ಯವಂತರಾಗಿ ಬದುಕಲು ಮತ್ತು ಅನಾರೋಗ್ಯ ಪೀಡಿತರಿಗೆ ತುರ್ತಾಗಿ ರಕ್ತ ನೀಡಲು ಸಹಾಯವಾಗಲಿದೆ’ ಎಂದು ಹೇಳಿದರು.</p>.<p>‘ರೋಗಿಗಳಿಗೆ ರಕ್ತದ ಅವಶ್ಯಕತೆಯಿಂದ ನಿಮ್ಮ ಸಹಾಯ ಅತ್ಯಗತ್ಯವಾಗಿದೆ. ರಕ್ತ ನೀಡುವುದರಿಂದ ಯಾವುದೇ ಸಮಸ್ಯೆಗಳಿಲ್ಲ. ಹಾಗಾಗಿ ಉತ್ಸುಕರಾಗಿ ರಕ್ತದಾನ ಮಾಡಿದರೆ ಸ್ವಾಸ್ಥ್ಯ ಸಮಾಜಕ್ಕೆ ನಿರ್ಮಾಣಕ್ಕೆ ನಿಮ್ಮ ಕೊಡುಗೆ ಸಿಕ್ಕಿದಂತಾಗುತ್ತದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ, ‘ಇಂತಹ ಶಿಬಿರದಿಂದ ಸಾವಿರಾರು ಜನರ ಜೀವ ಉಳಿಸುವ ಭಾಗ್ಯ ಸಿಗಲಿದೆ. ಆ ಮೂಲಕ ಹೆಚ್ಚೆಚ್ಚು ದಾನಿಗಳು ರಕ್ತದಾನ ಮಾಡುವುದರ ಮೂಲಕ ಆರೋಗ್ಯ ಅನಾರೋಗ್ಯ ಪೀಡಿತರಿಗೆ ಆದಷ್ಟು ಬೇಗ ಅವರ ಸುಧಾರಣೆಗೆ ಸಹಕಾರಿಯಾಗಲಿದೆ’ ಎಂದು ಹೇಳಿದರು.</p>.<p>ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಶರೀಫ್ ಅಧ್ಯಕ್ಷತೆ ವಹಿಸಿದ್ದರು. 40ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.<br /> ಕಾರ್ಯದರ್ಶಿ ಸಚಿನ್, ಸಿ.ಸಿ.ಸುನಿಲ್, ವಿಶ್ವನಾಥ್, ನಾರಾಯಣ, ಅಶ್ರಫ್, ಕಲಂದರ್, ಮಡಿಕೇರಿ ವೈದ್ಯಕೀಯ ಮತ್ತು ವಿಜ್ಞಾನ ಕೇಂದ್ರದ ಕಾರ್ತಿಕ್, ಪೂರ್ಣಿಮಾ, ಸೌಮ್ಯ ಪಂಚಲಿಂಗೇಶ್ವರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>