<p>ಸುಂಟಿಕೊಪ್ಪ: ಸಮೀಪದ ಮಂಜಿಕೇರಿಯ ಆದಿಶಕ್ತಿ ಚಾಮುಂಡೇಶ್ವರಿ ಹಾಗೂ ಪಾಷಾಣಮೂರ್ತಿ ಅಮ್ಮನವರ ದೇವಸ್ಥಾನದ 5ನೇ ವರ್ಷದ ದೈವಕೋಲ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ಶುಕ್ರವಾರ ಬೆಳಿಗ್ಗೆ ಗಣಪತಿ ಹೋಮದೊಂದಿಗೆ ವಾರ್ಷಿಕೋತ್ಷವಕ್ಕೆ ಚಾಲನೆ ನೀಡಲಾಯಿತು. ಶನಿವಾರ ಬೆಳಿಗ್ಗೆ ದೇವಾಲಯದಲ್ಲಿ ಕಳಸ ಮೆರವಣಿಗೆ ನಡೆಯಿತು.ಮದ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.</p>.<p>ರಾತ್ರಿ 7 ಗಂಟೆಗೆ ನೇಮೋತ್ಸವದ ಅಂಗವಾಗಿ ಭಂಡಾರ ಪೂಜೆ, ಮೆರವಣಿಗೆ ನಡೆದ ನಂತರ ರಾತ್ರಿ ಕಲ್ಲುರ್ಟಿ- ಕಲ್ಕುಡ ದೈವಗಳ ನೇಮ, ಚಾಮುಂಡಿ ಗುಳಿಗ ದೈವಗಳ ನೇಮ, ಭದ್ರಕಾಳೇಶ್ವರಿ ದೈವದ ನೇಮ, ಕೊರಗ ತನಿಯ ದೈವಗಳ ಕೋಲ ನೇಮೋತ್ಸವ ಭಾನುವಾರ ಬೆಳಿಗ್ಗೆಯವರೆಗೆ ನಡೆಯಿತು.</p>.<p>ಇದೇ ವೇಳೆ ನೆರೆದಿದ್ದ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೈವಗಳಲ್ಲಿ ಬೇಡಿಕೊಂಡರು. ಅಲ್ಲದೇ ಹರಕೆ ಅರ್ಪಿಸಿದರು. ಸ್ಥಳೀಯರು ಮಾತ್ರವಲ್ಲದೇ ಜಿಲ್ಲೆ, ಹೊರಜಿಲ್ಲೆಗಳ ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-51-1430651219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಂಟಿಕೊಪ್ಪ: ಸಮೀಪದ ಮಂಜಿಕೇರಿಯ ಆದಿಶಕ್ತಿ ಚಾಮುಂಡೇಶ್ವರಿ ಹಾಗೂ ಪಾಷಾಣಮೂರ್ತಿ ಅಮ್ಮನವರ ದೇವಸ್ಥಾನದ 5ನೇ ವರ್ಷದ ದೈವಕೋಲ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ಶುಕ್ರವಾರ ಬೆಳಿಗ್ಗೆ ಗಣಪತಿ ಹೋಮದೊಂದಿಗೆ ವಾರ್ಷಿಕೋತ್ಷವಕ್ಕೆ ಚಾಲನೆ ನೀಡಲಾಯಿತು. ಶನಿವಾರ ಬೆಳಿಗ್ಗೆ ದೇವಾಲಯದಲ್ಲಿ ಕಳಸ ಮೆರವಣಿಗೆ ನಡೆಯಿತು.ಮದ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.</p>.<p>ರಾತ್ರಿ 7 ಗಂಟೆಗೆ ನೇಮೋತ್ಸವದ ಅಂಗವಾಗಿ ಭಂಡಾರ ಪೂಜೆ, ಮೆರವಣಿಗೆ ನಡೆದ ನಂತರ ರಾತ್ರಿ ಕಲ್ಲುರ್ಟಿ- ಕಲ್ಕುಡ ದೈವಗಳ ನೇಮ, ಚಾಮುಂಡಿ ಗುಳಿಗ ದೈವಗಳ ನೇಮ, ಭದ್ರಕಾಳೇಶ್ವರಿ ದೈವದ ನೇಮ, ಕೊರಗ ತನಿಯ ದೈವಗಳ ಕೋಲ ನೇಮೋತ್ಸವ ಭಾನುವಾರ ಬೆಳಿಗ್ಗೆಯವರೆಗೆ ನಡೆಯಿತು.</p>.<p>ಇದೇ ವೇಳೆ ನೆರೆದಿದ್ದ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೈವಗಳಲ್ಲಿ ಬೇಡಿಕೊಂಡರು. ಅಲ್ಲದೇ ಹರಕೆ ಅರ್ಪಿಸಿದರು. ಸ್ಥಳೀಯರು ಮಾತ್ರವಲ್ಲದೇ ಜಿಲ್ಲೆ, ಹೊರಜಿಲ್ಲೆಗಳ ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-51-1430651219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>