ಸುಂಟಿಕೊಪ್ಪ: ಇಲ್ಲಿನ ಗ್ರಾಮ ದೇವರ ನಾಲ್ಕನೇ ವರ್ಷದ ವಾರ್ಷಿಕ ಪೂಜೋತ್ಸವವು ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ, ರಾಮ ಸೇವಾ ಸಮಿತಿ, ಅಯ್ಯಪ್ಪ ದೇವಾಲಯ, ಗೌರಿ ಗಣೇಶೋತ್ಸವ, ಮಸಣಕಮ್ಮ ದೇವಸ್ಥಾನ, ವೃಕ್ಷೋದ್ಭವ ಗಣಪತಿ ದೇವಾಲಯ, ಟಿಸಿಎಲ್ ಚಾಮುಂಡೇಶ್ವರಿ ದೇವಸ್ಥಾನ, ಶ್ರೀದೇವಿ ಅಣ್ಣಪ್ಪ ದೇವಾಲಯ, ಬಾಳೆಕಾಡು ಮುತ್ತಪ್ಪ ದೇವಸ್ಥಾನ ಸಮಿತಿ ಸಹಭಾಗಿತ್ವದಲ್ಲಿ ಶುಕ್ರವಾರದಂದು ನೂರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಅರ್ಚಕ ಗಣೇಶ್ ಭಟ್ ಅವರಿಂದ ಸ್ಥಳ ಶುದ್ಧಿ ಕಳಸದೊಂದಿಗೆ ಪೂಜಾ ವಿಧಿವಿಧಾನಗಳು ನಡೆದವು.
ಕುಂಕುಮ ಪೂಜೆ, ಅಲಂಕಾರ ಪೂಜೆಯ ನಂತರ 10.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನಂತರ ಗ್ರಾಮ ದೇವರಿಗೆ ಹರಕೆ ಸಮರ್ಪಣೆ ನಡೆಯಿತು. ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಗ್ರಾಮ ದೇವತೆಗೆ ಹರಕೆ ಒಪ್ಪಿಸಿ ಸಂತೃಪ್ತರಾದರು.