<p>ಸುಂಟಿಕೊಪ್ಪ: ಸರ್ವ ಜನಾಂಗದ ಶಾಂತಿಯ ತೋಟ ಎಂದೇ ಹೆಸರುವಾಸಿಯಾಗಿರುವ ಸುಂಟಿಕೊಪ್ಪದ ಹೃದಯ ಭಾಗದಲ್ಲಿ ನಿರ್ಮಿಸಿರುವ ಕನ್ನಡ ವೃತ್ತ ಈ ಬಾರಿಯ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನಷ್ಟು ಮೆರುಗು ನೀಡಲಿದೆ.</p>.<p>ಕಳೆದ 30 ರ್ಷಗಳಿಂದ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಹೆಗ್ಗಳಿಕೆ ಈ ವೃತ್ತಕ್ಕಿದೆ. ಕಳೆದ 29 ವರ್ಷಗಳ ಹಿಂದೆ ಪುಟ್ಟದಾದ ಕನ್ನಡ ವೃತ್ತವನ್ನು ನಿರ್ಮಿಸಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿತ್ತು. ಕಾವೇರಿ ಕನ್ನಡ ಕಲಾಸಂಘವು, ಸುಂಟಿಕೊಪ್ಪ ಪ್ರತಿಭಾ ಬಳಗ ಸದಸ್ಯರು ಈ ಹೃದಯ ಭಾಗದ ಈ ಪುಟ್ಟ ವೃತ್ತದಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಕ್ಲಾಡಿಯಾಸ್ ಲೋಬೋ ಅವರ ಪರಿಶ್ರಮದಿಂದ ಈ ಸ್ಥಳದಲ್ಲಿ ಸಿಮೆಂಟ್ ತೊಟ್ಟಿ ಸಿದ್ದವಾಗಿ ಕನ್ನಡ ವೃತ್ತಕ್ಕೆ ಶಾಶ್ವತ ನೆಲೆ ಸಿದ್ಧಕೊಂಡಿತ್ತು.</p>.<p>ರಾಷ್ಟ್ರೀಯ ಹೆದ್ದಾರಿ ಕೆಲಸ ಮಾಡುತ್ತಿರುವ ವೇಳೆ ಹೆದ್ದಾರಿ ಪ್ರಾಧಿಕಾರವು ಈ ಸಿಮೆಂಟು ತೊಟ್ಟಿಯನ್ನು ತೆರವುಗೊಳಿಸಿತು. ಕಾಮಗಾರಿ ಮುಗಿದ ನಂತರ ಮತ್ತೆ ಅದೇ ಸ್ಥಳದಲ್ಲಿ ಅಳವಡಿಸಲು ಹೋದಾಗ ಪೊಲೀಸರು ಅಡ್ಡಿಪಡಿಸಿದರು. ಚುಟುಕು ಸಾಹಿತಿ ವಹೀದ್ ಜಾನ್ ವಿನ್ಸೆಂಟ್ ಸೇರಿದಂತೆ ಇತರರು ಪಟ್ಟು ಹಿಡಿದು ಸಿಮೆಂಟ್ನಿಂದ ವೃತ್ತವನ್ನು ನಿರ್ಮಿಸಿ ವೃತ್ತಕ್ಕೆ ಅರಿಸಿನ- ಕೆಂಪು ಬಣ್ಣದ ಪೇಂಟ್ ಹಚ್ಚಿ ಕನ್ನಡ ವೃತ್ತ ಎಂದು ಬರೆಯಿಸಿದರು. ನಂತರ ಸ್ನೇಹಿತರ ಕೂಟದ ಸದಸ್ಯರು ಕನ್ನಡ ರಾಜ್ಯೋತ್ಸವದ ಹೊಣೆ ಹೊತ್ತುಕೊಂಡರು. ನಂತರದ ದಿನಗಳಲ್ಲಿ ನಮ್ಮ ಸುಂಟಿಕೊಪ್ಪ ಬಳಗ ಇದರ ಉಸ್ತುವಾರಿ ವಹಿಸಿಕೊಂಡಿತು. 2019ರಲ್ಲಿ ಈ ವೃತ್ತಕ್ಕೆ 25 ವರ್ಷ ತುಂಬಿದ್ದರಿಂದ ನಮ್ಮ ಸುಂಟಿಕೊಪ್ಪ ಬಳಗದ ಸದಸ್ಯರು ಕನ್ನಡ ವೃತ್ತಕ್ಕೆ ದಾನಿಗಳ ಸಹಾಯದಿಂದ ಸ್ಟೀಲ್ ನಿಂದ ಅ ದಿಂದ ಅಃ ದವರೆಗಿನ ಕನ್ನಡ ಅಕ್ಷರಮಾಲೆಯ ರಕ್ಷಣಾ ಕವಚ ಅಳವಡಿಸಿದ್ದರು.</p>.<p>2020ರ ನಂತರ ಈ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಹೊಣೆಗಾರಿಕೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ವಹಿಸಿಕೊಂಡಿದೆ. ವರ್ಷದ 365 ದಿನವೂ ಇಲ್ಲಿ ಕನ್ನಡದ ಬಾವುಟ ಇರುವುದು ವಿಶೇಷ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-51-1619042647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಂಟಿಕೊಪ್ಪ: ಸರ್ವ ಜನಾಂಗದ ಶಾಂತಿಯ ತೋಟ ಎಂದೇ ಹೆಸರುವಾಸಿಯಾಗಿರುವ ಸುಂಟಿಕೊಪ್ಪದ ಹೃದಯ ಭಾಗದಲ್ಲಿ ನಿರ್ಮಿಸಿರುವ ಕನ್ನಡ ವೃತ್ತ ಈ ಬಾರಿಯ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನಷ್ಟು ಮೆರುಗು ನೀಡಲಿದೆ.</p>.<p>ಕಳೆದ 30 ರ್ಷಗಳಿಂದ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಹೆಗ್ಗಳಿಕೆ ಈ ವೃತ್ತಕ್ಕಿದೆ. ಕಳೆದ 29 ವರ್ಷಗಳ ಹಿಂದೆ ಪುಟ್ಟದಾದ ಕನ್ನಡ ವೃತ್ತವನ್ನು ನಿರ್ಮಿಸಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿತ್ತು. ಕಾವೇರಿ ಕನ್ನಡ ಕಲಾಸಂಘವು, ಸುಂಟಿಕೊಪ್ಪ ಪ್ರತಿಭಾ ಬಳಗ ಸದಸ್ಯರು ಈ ಹೃದಯ ಭಾಗದ ಈ ಪುಟ್ಟ ವೃತ್ತದಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಕ್ಲಾಡಿಯಾಸ್ ಲೋಬೋ ಅವರ ಪರಿಶ್ರಮದಿಂದ ಈ ಸ್ಥಳದಲ್ಲಿ ಸಿಮೆಂಟ್ ತೊಟ್ಟಿ ಸಿದ್ದವಾಗಿ ಕನ್ನಡ ವೃತ್ತಕ್ಕೆ ಶಾಶ್ವತ ನೆಲೆ ಸಿದ್ಧಕೊಂಡಿತ್ತು.</p>.<p>ರಾಷ್ಟ್ರೀಯ ಹೆದ್ದಾರಿ ಕೆಲಸ ಮಾಡುತ್ತಿರುವ ವೇಳೆ ಹೆದ್ದಾರಿ ಪ್ರಾಧಿಕಾರವು ಈ ಸಿಮೆಂಟು ತೊಟ್ಟಿಯನ್ನು ತೆರವುಗೊಳಿಸಿತು. ಕಾಮಗಾರಿ ಮುಗಿದ ನಂತರ ಮತ್ತೆ ಅದೇ ಸ್ಥಳದಲ್ಲಿ ಅಳವಡಿಸಲು ಹೋದಾಗ ಪೊಲೀಸರು ಅಡ್ಡಿಪಡಿಸಿದರು. ಚುಟುಕು ಸಾಹಿತಿ ವಹೀದ್ ಜಾನ್ ವಿನ್ಸೆಂಟ್ ಸೇರಿದಂತೆ ಇತರರು ಪಟ್ಟು ಹಿಡಿದು ಸಿಮೆಂಟ್ನಿಂದ ವೃತ್ತವನ್ನು ನಿರ್ಮಿಸಿ ವೃತ್ತಕ್ಕೆ ಅರಿಸಿನ- ಕೆಂಪು ಬಣ್ಣದ ಪೇಂಟ್ ಹಚ್ಚಿ ಕನ್ನಡ ವೃತ್ತ ಎಂದು ಬರೆಯಿಸಿದರು. ನಂತರ ಸ್ನೇಹಿತರ ಕೂಟದ ಸದಸ್ಯರು ಕನ್ನಡ ರಾಜ್ಯೋತ್ಸವದ ಹೊಣೆ ಹೊತ್ತುಕೊಂಡರು. ನಂತರದ ದಿನಗಳಲ್ಲಿ ನಮ್ಮ ಸುಂಟಿಕೊಪ್ಪ ಬಳಗ ಇದರ ಉಸ್ತುವಾರಿ ವಹಿಸಿಕೊಂಡಿತು. 2019ರಲ್ಲಿ ಈ ವೃತ್ತಕ್ಕೆ 25 ವರ್ಷ ತುಂಬಿದ್ದರಿಂದ ನಮ್ಮ ಸುಂಟಿಕೊಪ್ಪ ಬಳಗದ ಸದಸ್ಯರು ಕನ್ನಡ ವೃತ್ತಕ್ಕೆ ದಾನಿಗಳ ಸಹಾಯದಿಂದ ಸ್ಟೀಲ್ ನಿಂದ ಅ ದಿಂದ ಅಃ ದವರೆಗಿನ ಕನ್ನಡ ಅಕ್ಷರಮಾಲೆಯ ರಕ್ಷಣಾ ಕವಚ ಅಳವಡಿಸಿದ್ದರು.</p>.<p>2020ರ ನಂತರ ಈ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಹೊಣೆಗಾರಿಕೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ವಹಿಸಿಕೊಂಡಿದೆ. ವರ್ಷದ 365 ದಿನವೂ ಇಲ್ಲಿ ಕನ್ನಡದ ಬಾವುಟ ಇರುವುದು ವಿಶೇಷ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-51-1619042647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>