<p><strong>ಕುಶಾಲನಗರ:</strong> ಕೊಡಗು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ (ಮೌಲ್ಯಮಾಪನ) ಪ್ರೊ.ಎಂ. ಸುರೇಶ್ ಶುಕ್ರವಾರ ಅಧಿಕಾರ ಸ್ವೀಕಾರ ಸ್ವೀಕರಿಸಿದರು.</p>.<p>ನಿರ್ಗಮಿತ ಕುಲ ಸಚಿವ ಸೀನಪ್ಪ ಅವರು ನೂತನ ಕುಲ ಸಚಿವರಿಗೆ ಅಧಿಕಾರ ಹಸ್ತಾಂತರ ಮಾಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಕೊಡಗು ವಿಶ್ವವಿದ್ಯಾಲಯ ಉತ್ತಮ ವಾತಾವರಣದಲ್ಲಿ ನಿರ್ಮಾಣವಾಗಿದ್ದು, ಈ ವಿಶ್ವವಿದ್ಯಾಲಯವನ್ನು ರಾಜ್ಯಕ್ಕೆ ಮಾದರಿ ವಿಶ್ವವಿದ್ಯಾಲಯ ಮಾಡುವ ಕಲ್ಪನೆ ನಮ್ಮ ನಿಮ್ಮೆಲ್ಲರ ಮೇಲಿದೆ ಅದಕ್ಕೆ ಎಲ್ಲಾ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಿ ಕನಸು ನನಸು ಮಾಡಬೇಕು’ ಎಂದರು.</p>.<p>ಸೀನಪ್ಪ ಮಾತನಾಡಿ, ‘ಕೊಡಗು ಜನರ ಆಶೋತ್ತರ ಹಾಗೂ ಕನಸನ್ನು ಸಾಕಾರಗೊಳಿಸಲು ಸಾಕಷ್ಟು ಪ್ರಯತ್ನ ಪಡುವ ಕೆಲಸ ಮಾಡಿದ್ದೇವೆ. ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಸಹಕಾರದಿಂದ ವಿಶ್ವವಿದ್ಯಾಲಯವನ್ನು ಉನ್ನತ ಮಟ್ಟಕ್ಕೆ ತಲುಪಿಸುವ ಕೆಲಸ ಮಾಡಿದ್ದೇವೆ’ ಎಂದರು.</p>.<p>ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರಾಘವನ್, ಸಹಾಯಕ ಪ್ರಧ್ಯಾಪಕರಾದ ರವಿಶಂಕರ್ ಎಂ.ಎನ್, ತಿಪ್ಪೇಸ್ವಾಮಿ, ನಾಗರಾಜ್ ಕೆ.ಟಿ, ಎಂ.ಪಿ. ಕೃಷ್ಣ, ಅರುಣ್ ಕುಮಾರ್, ಗಗನ್, ಮಮತಾ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಕೊಡಗು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ (ಮೌಲ್ಯಮಾಪನ) ಪ್ರೊ.ಎಂ. ಸುರೇಶ್ ಶುಕ್ರವಾರ ಅಧಿಕಾರ ಸ್ವೀಕಾರ ಸ್ವೀಕರಿಸಿದರು.</p>.<p>ನಿರ್ಗಮಿತ ಕುಲ ಸಚಿವ ಸೀನಪ್ಪ ಅವರು ನೂತನ ಕುಲ ಸಚಿವರಿಗೆ ಅಧಿಕಾರ ಹಸ್ತಾಂತರ ಮಾಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಕೊಡಗು ವಿಶ್ವವಿದ್ಯಾಲಯ ಉತ್ತಮ ವಾತಾವರಣದಲ್ಲಿ ನಿರ್ಮಾಣವಾಗಿದ್ದು, ಈ ವಿಶ್ವವಿದ್ಯಾಲಯವನ್ನು ರಾಜ್ಯಕ್ಕೆ ಮಾದರಿ ವಿಶ್ವವಿದ್ಯಾಲಯ ಮಾಡುವ ಕಲ್ಪನೆ ನಮ್ಮ ನಿಮ್ಮೆಲ್ಲರ ಮೇಲಿದೆ ಅದಕ್ಕೆ ಎಲ್ಲಾ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಿ ಕನಸು ನನಸು ಮಾಡಬೇಕು’ ಎಂದರು.</p>.<p>ಸೀನಪ್ಪ ಮಾತನಾಡಿ, ‘ಕೊಡಗು ಜನರ ಆಶೋತ್ತರ ಹಾಗೂ ಕನಸನ್ನು ಸಾಕಾರಗೊಳಿಸಲು ಸಾಕಷ್ಟು ಪ್ರಯತ್ನ ಪಡುವ ಕೆಲಸ ಮಾಡಿದ್ದೇವೆ. ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಸಹಕಾರದಿಂದ ವಿಶ್ವವಿದ್ಯಾಲಯವನ್ನು ಉನ್ನತ ಮಟ್ಟಕ್ಕೆ ತಲುಪಿಸುವ ಕೆಲಸ ಮಾಡಿದ್ದೇವೆ’ ಎಂದರು.</p>.<p>ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರಾಘವನ್, ಸಹಾಯಕ ಪ್ರಧ್ಯಾಪಕರಾದ ರವಿಶಂಕರ್ ಎಂ.ಎನ್, ತಿಪ್ಪೇಸ್ವಾಮಿ, ನಾಗರಾಜ್ ಕೆ.ಟಿ, ಎಂ.ಪಿ. ಕೃಷ್ಣ, ಅರುಣ್ ಕುಮಾರ್, ಗಗನ್, ಮಮತಾ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>