ಬೆಳಿಗ್ಗೆ 8 ಗಂಟೆಗೆ ಆರಂಭವಾದ ಅಭಿಯಾನ ಸಾವಿರಾರು ಮಂದಿ ಭಾಗಿ | ಕೆಲವೆಡೆ ಸ್ವಯಂಪ್ರೇರಿತರಾಗಿ ಸಾರ್ವಜನಿಕರೂ ಭಾಗಿ
ಸ್ವಚ್ಛ ಮತ್ತು ಸುಂದರ ಕೊಡಗು ನಿರ್ಮಾಣದ ಜವಾಬ್ದಾರಿ ಜಿಲ್ಲೆಯ ಪ್ರತಿಯೊಬ್ಬರ ಮೇಲಿದೆ. ಇಲ್ಲಿನ ಪ್ರಕೃತಿ ಕಾಪಾಡದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುತ್ತದೆ.
ಡಾ.ಮಂತರ್ಗೌಡ ಶಾಸಕ.
ಅಭಿಯಾನದಲ್ಲಿ ಜಿಲ್ಲೆಯಾದ್ಯಂತ ಸಂಗ್ರಹವಾಗುವ ಕಸವನ್ನು ಮೈಸೂರಿನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಳುಹಿಸಲಾಗುವುದು. ಕೊಡಗಿಗೆ ಅಗತ್ಯವಾಗಿದ್ದ ಅಭಿಯಾನ ಇದಾಗಿದ್ದು ಅಸಾಧ್ಯ ಯಾವುದು ಇಲ್ಲ ಎಂಬುದನ್ನು ಸಾಬೀತುಪಡಿಸಿದೆ.
ವೆಂಕಟ್ ರಾಜಾ ಜಿಲ್ಲಾಧಿಕಾರಿ.
ಜವಾಬ್ದಾರಿಯುತ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಪ್ರವಾಸೋದ್ಯಮ ಅವಲಂಬಿತರು ಜವಾಬ್ದಾರಿ ತೆಗೆದುಕೊಂಡು ಈ ಯೋಜನೆ ರೂಪಿಸಲಾಗಿದೆ. ಇದರಲ್ಲಿ 320 ಕ್ಕೂ ಅಧಿಕ ಸಂಘ ಸಂಸ್ಥೆಗಳು ಪಾಲ್ಗೊಂಡಿವೆ
ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಕೂರ್ಗ್ ಹೋಟೆಲ್ ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ.