ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಮಾತನಾಡಿ, ರಸ್ತೆ ಕಾಮಗಾರಿಗೆ ಮಳೆಗೂ ಮುನ್ನ ಟೆಂಡರ್ ಪ್ರಕ್ರಿಯೆ ನಡೆದಿತ್ತು. ಆದರೆ, ವಿಧಾನ ಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ಮಾಡಲು ಸಾಧ್ಯವಾಗಲಿಲ್ಲ. ಇದೀಗ ಭಾರಿ ಮಳೆಯಾಗುತ್ತಿದ್ದು, ಮಳೆ ಮುಗಿದ ನಂತರ ರಸ್ತೆ ಕಾಮಗಾರಿ ಮಾಡುವುದಾಗಿ ತಿಳಿಸಿದರು.