‘ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದರೂ, ಹಿಂದೂ ಧರ್ಮದ ಆಚಾರ– ವಿಚಾರ ಪಾಲಿಸುತ್ತಾ ಬಂದಿದ್ದಾರೆ. ಮದುವೆಯಾದ ಹೆಣ್ಣುಮಕ್ಕಳು, ಮದುವೆಯಾದ ಕುಟುಂಬಕ್ಕೆ ಸೇರುತ್ತಾರೆ. ಆ ಕುಟುಂಬದ ಹೆಸರನ್ನೂ ಹೊಂದುತ್ತಾರೆ. ಪರಿಹಾರದ ವಿಚಾರವಾಗಿಯೂ ಚರ್ಚೆ ನಡೆಯುತ್ತಿದ್ದು, ಕಾನೂನು ಪ್ರಕಾರ ಯಾರಿಗೆ ಸಿಗಬೇಕೋ ಅವರಿಗೆ ಸಿಗಲಿದೆ. ಆನಂದತೀರ್ಥ ಅವರ ಸಹೋದರಿ ಸುಶೀಲಾ ಅವರಿಗೂ ವಯಸ್ಸಾಗಿದೆ. ಆನಂದತೀರ್ಥ ಅವರ ಪರಿಹಾರ ಹಣವು ಸುಶೀಲಾ ಅವರಿಗೆ ಸಿಗಲಿ’ ಎಂದು ಹೇಳಿದರು.