ಪ್ರಧಾನ ಅರ್ಚಕರಾಗಿದ್ದ ನಾರಾಯಣ ಆಚಾರ್ ಅವರ ಪತ್ನಿ ಶಾಂತ ಆಚಾರ್, ಸಹಾಯಕ ಅರ್ಚಕ ಶ್ರೀನಿವಾಸ್ ಅವರು ಕಣ್ಮರೆಯಾಗಿ 16 ದಿನವಾದರೂ ಸುಳಿವು ಸಿಕ್ಕಿಲ್ಲ. ಮಳೆ, ಮಂಜಿನ ವಾತಾವರಣದ ನಡುವೆ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಬ್ಬರಿಗೆ ಸಂಬಂಧಪಟ್ಟ ವಸ್ತುಗಳು ಮಾತ್ರ ಪತ್ತೆಯಾಗಿದ್ದು ಬಿಟ್ಟರೆ ಯಾವುದೇ ಮಾಹಿತಿ ದೊರೆಯದ ಕಾರಣಕ್ಕೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.