<p><strong>ನಾಪೋಕ್ಲು:</strong> ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಿ ಕೈ ತೊಳೆಯಲೆಂದು ಹೋದ ಶಿಕ್ಷಕರೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಜಯ ಪೂವಣ್ಣ (55) ಅವರು ಕೊಂಡಂಗೇರಿ ಸಮೀಪದ ಕಾಫಿ ತೋಟಕ್ಕೆ ಮಂಗಳವಾರ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ.</p>.<p>ಪಾರಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.</p>.<p>ತೋಟದಿಂದ ಶಾಲೆಗೂ ತೆರಳದೆ, ಮನೆಗೂ ಹಿಂತಿರುಗದೆ ಇದ್ದುದರಿಂದ ಸಂಶಯಗೊಂಡ ಕುಟುಂಬಸ್ಥರು ಹುಡುಕಾಡಿದಾಗ ಕೆರೆಗೆ ಬಿದ್ದಿರುವುದು ಗೊತ್ತಾಗಿದೆ.</p>.<p>ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಅಂತ್ಯಸಂಸ್ಕಾರ ಬುಧವಾರ ಕೊಳಕೇರಿ ಗ್ರಾಮದಲ್ಲಿ ಜರುಗಿತು.</p>.<p>ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಿ ಕೈ ತೊಳೆಯಲೆಂದು ಹೋದ ಶಿಕ್ಷಕರೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಜಯ ಪೂವಣ್ಣ (55) ಅವರು ಕೊಂಡಂಗೇರಿ ಸಮೀಪದ ಕಾಫಿ ತೋಟಕ್ಕೆ ಮಂಗಳವಾರ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ.</p>.<p>ಪಾರಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.</p>.<p>ತೋಟದಿಂದ ಶಾಲೆಗೂ ತೆರಳದೆ, ಮನೆಗೂ ಹಿಂತಿರುಗದೆ ಇದ್ದುದರಿಂದ ಸಂಶಯಗೊಂಡ ಕುಟುಂಬಸ್ಥರು ಹುಡುಕಾಡಿದಾಗ ಕೆರೆಗೆ ಬಿದ್ದಿರುವುದು ಗೊತ್ತಾಗಿದೆ.</p>.<p>ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಅಂತ್ಯಸಂಸ್ಕಾರ ಬುಧವಾರ ಕೊಳಕೇರಿ ಗ್ರಾಮದಲ್ಲಿ ಜರುಗಿತು.</p>.<p>ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>