<p><strong>ನಾಪೋಕ್ಲು:</strong> ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸ್ಥಳೀಯ ಸಂಪನ್ಮೂಲ ಕ್ರೋಢೀಕರಣ ಕುಸಿತವಾಗಿರುವುದರಿಂದ ಭಗಂಡೇಶ್ವರ ದೇವಸ್ಥಾನದ ಆವರಣದಲ್ಲಿ ಸಂಗ್ರಹವಾಗುವ ಕಸವನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲ ಎಂದು ಭಾಗಮಂಡಲ ಗ್ರಾಮ ಪಂಚಾಯಿತಿಯು ಶ್ರೀ ಭಗಂಡೇಶ್ವರ ತಲಕಾವೇರಿ ಮತ್ತು ಸಮೂಹವು ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ.</p>.<p>ಭಾಗಮಂಡಲದ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ಭಕ್ತರು ಮತ್ತು ಪ್ರವಾಸಿಗರಿಂದ ಸಂಗ್ರಹವಾಗುವ ಕಸವನ್ನು ಲೇವಾರಿ ಮಾಡುವಂತೆ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿಗಳು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದು, ಈಚೆಗೆ ನಡೆದ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ‘ದೇವಸ್ಥಾನದ ಆಡಳಿತ ಮಂಡಳಿಯೇ ಕಸ ವಿಲೇವಾರಿ ನಿರ್ವಹಣೆ ಮಾಡಬೇಕು’ ಸೂಚಿಸಿದೆ. </p>.<p>‘2024-25ರ ಸಾಲಿನವರೆಗೆ ಪಂಚಾಯಿತಿ ವ್ಯಾಪ್ತಿಯ ಹಾಗೂ ದೇವಸ್ಥಾನದ ಆವರಣದಲ್ಲಿರುವ ಕಸವನ್ನು ಪಂಚಾಯಿತಿಯಿಂದಲೇ ಸಂಗ್ರಹಿಸಿ ನಿರ್ವಹಿಸಲಾಗುತ್ತಿತ್ತು. ಕಸದ ನಿರ್ವಹಣೆಗೆ ಪ್ರತಿ ತಿಂಗಳು ₹35 ಸಾವಿರದಂತೆ ಹಾಗೂ ಸ್ವಚ್ಛವಾಹಿನಿ ಇನ್ನಿತರ ಖರ್ಚು ಸೇರಿ ವರ್ಷಕ್ಕೆ ₹4.50 ಲಕ್ಷ ಖರ್ಚು ಮಾಡಲಾಗುತ್ತಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ ತಿಳಿಸಿದ್ದಾರೆ.</p>.<p>‘ಭಾಗಮಂಡಲ- ತಲಕಾವೇರಿ, ಭಾಗಮಂಡಲ- ತಾವೂರು, ಚೆದುಕಾರು ಮತ್ತು ಭಾಗಮಂಡಲದಿಂದ ಕಸ ವಿಲೇವಾರಿ ಘಟಕಕ್ಕೆ ಅಂದಾಜು 30 ಕಿಲೋ ಮೀಟರ್ ದೂರ ವಾರದಲ್ಲಿ ಮೂರು ದಿನ ಕಸ ವಿಲೇವಾರಿಯ ಸ್ವಚ್ಛವಾಹಿನಿ ಕಾರ್ಯ ನಿರ್ವಹಿಸುತ್ತಿದೆ. ಸಂಪನ್ಮೂಲದ ಕೊರತೆಯಿಂದ ದೇವಸ್ಥಾನದ ಆವರಣದಲ್ಲಿರುವ ಕಸವನ್ನು ಪಂಚಾಯಿತಿಗೆ ಸಂಗ್ರಹ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮ ಪಂಚಾಯಿತಿ ತಿಕ್ಕಾಟದಿಂದ ದೇವಸ್ಥಾನದ ಆವರಣದಲ್ಲಿ ಕಸದ ರಾಶಿ ತುಂಬಿ ಗಬ್ಬೆದ್ದು ನಾರುತಿದೆ. ಇತ್ತ ದೇವಾಲಯದ ಸಮಿತಿಯೂ ಕಸ ವಿಲೇವಾರಿ ಮಾಡುತ್ತಿಲ್ಲ. ಅತ್ತ ಗ್ರಾಮ ಪಂಚಾಯಿತಿಯು ಗಮನಹರಿಸುತ್ತಿಲ್ಲ. 2018ರಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಈ ಗ್ರಾಮ ಪಂಚಾಯಿತಿ ಗ್ರಾಮದ ಸ್ವಚ್ಛತೆ ಮಾತ್ರ ಗಮನಹರಿಸುತ್ತಿದೆ’ ಎಂದು ನಾಗರಿಕರು ಆರೋಪಿಸಿದ್ದಾರೆ.</p>.<p>‘ಅಧಿಕಾರಿಗಳು ದೇವಾಲಯದ ಸ್ವಚ್ಛತೆಯತ್ತ ಗಮನ ಹರಿಸುವುದು ಅನಿವಾರ್ಯ. ನಾಪೋಕ್ಲು ವ್ಯಾಪ್ತಿಯಲ್ಲೂ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ಜನರು ಇದೀಗ ರಸ್ತೆ ಮಧ್ಯದಲ್ಲಿಯೇ ತಂದು ಹಾಕುತ್ತಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂದು ಇಲ್ಲಿನ ನಾಗರಿಕರು ಆರೋಪಿಸಿದ್ದಾರೆ.</p>.<div><blockquote>ರಸ್ತೆ ಬದಿಯಲ್ಲಿ ಪದೇ ಪದೇ ತ್ಯಾಜ್ಯ ತಂದು ಹಾಕುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು </blockquote><span class="attribution">–ಚೋಂದಕ್ಕಿ ಪಿಡಿಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸ್ಥಳೀಯ ಸಂಪನ್ಮೂಲ ಕ್ರೋಢೀಕರಣ ಕುಸಿತವಾಗಿರುವುದರಿಂದ ಭಗಂಡೇಶ್ವರ ದೇವಸ್ಥಾನದ ಆವರಣದಲ್ಲಿ ಸಂಗ್ರಹವಾಗುವ ಕಸವನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲ ಎಂದು ಭಾಗಮಂಡಲ ಗ್ರಾಮ ಪಂಚಾಯಿತಿಯು ಶ್ರೀ ಭಗಂಡೇಶ್ವರ ತಲಕಾವೇರಿ ಮತ್ತು ಸಮೂಹವು ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ.</p>.<p>ಭಾಗಮಂಡಲದ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ಭಕ್ತರು ಮತ್ತು ಪ್ರವಾಸಿಗರಿಂದ ಸಂಗ್ರಹವಾಗುವ ಕಸವನ್ನು ಲೇವಾರಿ ಮಾಡುವಂತೆ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿಗಳು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದು, ಈಚೆಗೆ ನಡೆದ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ‘ದೇವಸ್ಥಾನದ ಆಡಳಿತ ಮಂಡಳಿಯೇ ಕಸ ವಿಲೇವಾರಿ ನಿರ್ವಹಣೆ ಮಾಡಬೇಕು’ ಸೂಚಿಸಿದೆ. </p>.<p>‘2024-25ರ ಸಾಲಿನವರೆಗೆ ಪಂಚಾಯಿತಿ ವ್ಯಾಪ್ತಿಯ ಹಾಗೂ ದೇವಸ್ಥಾನದ ಆವರಣದಲ್ಲಿರುವ ಕಸವನ್ನು ಪಂಚಾಯಿತಿಯಿಂದಲೇ ಸಂಗ್ರಹಿಸಿ ನಿರ್ವಹಿಸಲಾಗುತ್ತಿತ್ತು. ಕಸದ ನಿರ್ವಹಣೆಗೆ ಪ್ರತಿ ತಿಂಗಳು ₹35 ಸಾವಿರದಂತೆ ಹಾಗೂ ಸ್ವಚ್ಛವಾಹಿನಿ ಇನ್ನಿತರ ಖರ್ಚು ಸೇರಿ ವರ್ಷಕ್ಕೆ ₹4.50 ಲಕ್ಷ ಖರ್ಚು ಮಾಡಲಾಗುತ್ತಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ ತಿಳಿಸಿದ್ದಾರೆ.</p>.<p>‘ಭಾಗಮಂಡಲ- ತಲಕಾವೇರಿ, ಭಾಗಮಂಡಲ- ತಾವೂರು, ಚೆದುಕಾರು ಮತ್ತು ಭಾಗಮಂಡಲದಿಂದ ಕಸ ವಿಲೇವಾರಿ ಘಟಕಕ್ಕೆ ಅಂದಾಜು 30 ಕಿಲೋ ಮೀಟರ್ ದೂರ ವಾರದಲ್ಲಿ ಮೂರು ದಿನ ಕಸ ವಿಲೇವಾರಿಯ ಸ್ವಚ್ಛವಾಹಿನಿ ಕಾರ್ಯ ನಿರ್ವಹಿಸುತ್ತಿದೆ. ಸಂಪನ್ಮೂಲದ ಕೊರತೆಯಿಂದ ದೇವಸ್ಥಾನದ ಆವರಣದಲ್ಲಿರುವ ಕಸವನ್ನು ಪಂಚಾಯಿತಿಗೆ ಸಂಗ್ರಹ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮ ಪಂಚಾಯಿತಿ ತಿಕ್ಕಾಟದಿಂದ ದೇವಸ್ಥಾನದ ಆವರಣದಲ್ಲಿ ಕಸದ ರಾಶಿ ತುಂಬಿ ಗಬ್ಬೆದ್ದು ನಾರುತಿದೆ. ಇತ್ತ ದೇವಾಲಯದ ಸಮಿತಿಯೂ ಕಸ ವಿಲೇವಾರಿ ಮಾಡುತ್ತಿಲ್ಲ. ಅತ್ತ ಗ್ರಾಮ ಪಂಚಾಯಿತಿಯು ಗಮನಹರಿಸುತ್ತಿಲ್ಲ. 2018ರಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಈ ಗ್ರಾಮ ಪಂಚಾಯಿತಿ ಗ್ರಾಮದ ಸ್ವಚ್ಛತೆ ಮಾತ್ರ ಗಮನಹರಿಸುತ್ತಿದೆ’ ಎಂದು ನಾಗರಿಕರು ಆರೋಪಿಸಿದ್ದಾರೆ.</p>.<p>‘ಅಧಿಕಾರಿಗಳು ದೇವಾಲಯದ ಸ್ವಚ್ಛತೆಯತ್ತ ಗಮನ ಹರಿಸುವುದು ಅನಿವಾರ್ಯ. ನಾಪೋಕ್ಲು ವ್ಯಾಪ್ತಿಯಲ್ಲೂ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ಜನರು ಇದೀಗ ರಸ್ತೆ ಮಧ್ಯದಲ್ಲಿಯೇ ತಂದು ಹಾಕುತ್ತಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂದು ಇಲ್ಲಿನ ನಾಗರಿಕರು ಆರೋಪಿಸಿದ್ದಾರೆ.</p>.<div><blockquote>ರಸ್ತೆ ಬದಿಯಲ್ಲಿ ಪದೇ ಪದೇ ತ್ಯಾಜ್ಯ ತಂದು ಹಾಕುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು </blockquote><span class="attribution">–ಚೋಂದಕ್ಕಿ ಪಿಡಿಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>