ಮಡಿಕೇರಿ: ಇಲ್ಲಿನ ಅರಣ್ಯ ಇಲಾಖೆಯ ಸಂಶೋಧನಾ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ(27) ಎಂಬುವವರ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.
ಮಂಡ್ಯದವರಾದ ಅವರು ಕಳೆದ 2 ವರ್ಷಗಳಿಂದ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಅವರು ಒಬ್ಬರೇ ಇಲ್ಲಿನ ವಸತಿಗೃಹದಲ್ಲಿ ವಾಸವಿದ್ದರು. ಬುಧವಾರ ನೇಣು ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಪ್ರಕರಣ ದಾಖಲಾಗಿಲ್ಲ.