ಅರೆಕಾಡು ಗ್ರಾಮದ ಬಲಂಜಿಕರೆಯ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬುಧವಾರ ರಾತ್ರಿ ಕಳ್ಳರು ನುಗ್ಗಿದ್ದು, ಹುಂಡಿಯಲ್ಲಿದ್ದ ಅಂದಾಜು ₹ 20 ಸಾವಿರವನ್ನು ಕಳವು ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ದೇವಾಲಯ ಸಮಿತಿ ಅಧ್ಯಕ್ಷ ರವಿ ಕುಮಾರ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸ್ಥಳ ಪರಿಶೀಲಿಸಿ ವಿಚಾರಣೆ ನಡೆಸಿದರು, ಸ್ಥಳಕ್ಕೆ ಪೋಲಿಸ್ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.