ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಮಾತನಾಡಿ, ‘ಇಲ್ಲಿ 350ಕ್ಕೂ ಅಧಿಕ ಗಿರಿಜನ ಕುಟುಂಬಗಳು ಅತ್ಯಂತ ಸಂಕಷ್ಟಕರ ಜೀವನ ನಡೆಸುತ್ತಿದ್ದು, ಜೊತೆಗೆ ಅನೇಕ ಮಂದಿ ಅನಾರೋಗ್ಯದಿಂದಬಳಲುತ್ತಿದ್ದಾರೆ. ಕೊರೊನಾ ಆತಂಕ ಜನರನ್ನು ಕಾಡುತ್ತಿದೆ. ಪುನರ್ವಸತಿ ಕೇಂದ್ರದ ಜನರಿಗೆ ಸೂಕ್ತ ಚಿಕಿತ್ಸೆಯ ಕೂಡಾ ಲಭಿಸುತ್ತಿಲ್ಲ. ಅಲ್ಲದೇ ಸಂಬಂಧಪಟ್ಟ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮೂಲ ಸೌಲಭ್ಯಗಳ ಜೊತೆಗೆ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿಲ್ಲ’ ಎಂದು ದೂರಿದರು.