ಪಾಳು ಬಿದ್ದಿದ್ದ ಕೆರೆ: ಅತ್ತಿಮಂಗಲ ಸಮೀಪದ ಮುಖ್ಯ ರಸ್ತೆಯ ಬದಿಯಲ್ಲೇ ಇರುವ ಕೆರೆಯನ್ನು ಕಳೆದ ಒಂದು ತಿಂಗಳಿನಿಂದ ಅಭಿವೃದ್ಧಿ ಕಾರ್ಯವನ್ನು ಮಾಡಲಾಗಿದ್ದು, ಕೆರೆಯ ಸುತ್ತಲೂ ಇದ್ದ ಕುರಚಲು ಗಿಡ, ಹುಲ್ಲುಗಳನ್ನು ತೆರವುಗೊಳಿಸಿ, ಕೆರೆಯ ಹೂಳನ್ನು ಹೊರತೆಗೆಯಲಾಗಿದೆ. ರಸ್ತೆಯ ಬದಿಯಲ್ಲಿ ಕಸದ ತ್ಯಾಜ್ಯವನ್ನು ಸುರಿಯಲಾಗಿದ್ದು, ಇದೀಗ ತ್ಯಾಜ್ಯವನ್ನು ಕೆರೆಯಿಂದ ಹೊರತೆಗೆದು, ಶುಚಿಗೊಳಿಸಲಾಗಿದೆ. ಒಂದು ತಿಂಗಳಿನಿಂದ ಯುವಕರ ತಂಡ ಕೆರೆಯ ಅಭಿವೃದ್ಧಿಯಲ್ಲಿ ತೊಡಗಿದ್ದು, ಇದೀಗ ಕೆರೆಗೆ ಜೀವಕಳೆ ಬಂದಿದೆ.