<p><strong>ವಿರಾಜಪೇಟೆ:</strong> ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸಿದ 3 ಮಂದಿ ಆರೋಪಿಗಳನ್ನು ಸಿಐಡಿ ಅರಣ್ಯ ಘಟಕದ ಪೊಲೀಸರು ಬಂಧಿಸಿದ್ದು, ಎರಡು ನಕ್ಷತ್ರ ಆಮೆ ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ.</p>.<p>ರಾಮನಗರ ಜಿಲ್ಲೆಯ ಕನಕಪುರದ ಕೋಡಿಹಳ್ಳಿಯ ಎಂ.ರಾಮಮೂರ್ತಿ, ಚನ್ನಪಟ್ಟಣ ತಾಲ್ಲೂಕಿನ ವಿರೂಪಾಕ್ಷಪುರದ ವಿ.ಕೆ. ರಮೇಶ್, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಬಿ.ಎಸ್.ಯೊಗೇಶ್ ಬಂಧಿತರು.</p>.<p>ಆರೋಪಿಗಳು ರಾಮನಗರದಿಂದ ಗೋಣಿಕೊಪ್ಪಲು ಕಡೆಗೆ ಕಾರಿನಲ್ಲಿ ಆಮೆಗಳನ್ನು ಸಾಗಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನ ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 2 ನಕ್ಷತ್ರ ಆಮೆಗಳನ್ನು ₹ 50 ಲಕ್ಷಕ್ಕೆ ಮಾರಾಟ ಮಾಡಲು ಸಾಗಿಸಲಾಗುತ್ತಿತ್ತು. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.</p>.<p>ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ವಿರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಸಂಚಾರ ದಳದ ಸಬ್ಇನ್ಸ್ಪೆಕ್ಟರ್ ವೀಣಾ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಸಿಬ್ಬಂದಿ ಕೆ.ಬಿ.ಸೋಮಣ್ಣ, ಟಿ.ಪಿ.ಮಂಜುನಾಥ್, ಪಿ.ಬಿ.ಮೊಣ್ಣಪ್ಪ ಎಂ.ಬಿ.ಗಣೇಶ್ ಮತ್ತು ಎಸ್.ಎಂ.ಯೋಗೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸಿದ 3 ಮಂದಿ ಆರೋಪಿಗಳನ್ನು ಸಿಐಡಿ ಅರಣ್ಯ ಘಟಕದ ಪೊಲೀಸರು ಬಂಧಿಸಿದ್ದು, ಎರಡು ನಕ್ಷತ್ರ ಆಮೆ ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ.</p>.<p>ರಾಮನಗರ ಜಿಲ್ಲೆಯ ಕನಕಪುರದ ಕೋಡಿಹಳ್ಳಿಯ ಎಂ.ರಾಮಮೂರ್ತಿ, ಚನ್ನಪಟ್ಟಣ ತಾಲ್ಲೂಕಿನ ವಿರೂಪಾಕ್ಷಪುರದ ವಿ.ಕೆ. ರಮೇಶ್, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಬಿ.ಎಸ್.ಯೊಗೇಶ್ ಬಂಧಿತರು.</p>.<p>ಆರೋಪಿಗಳು ರಾಮನಗರದಿಂದ ಗೋಣಿಕೊಪ್ಪಲು ಕಡೆಗೆ ಕಾರಿನಲ್ಲಿ ಆಮೆಗಳನ್ನು ಸಾಗಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನ ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 2 ನಕ್ಷತ್ರ ಆಮೆಗಳನ್ನು ₹ 50 ಲಕ್ಷಕ್ಕೆ ಮಾರಾಟ ಮಾಡಲು ಸಾಗಿಸಲಾಗುತ್ತಿತ್ತು. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.</p>.<p>ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ವಿರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಸಂಚಾರ ದಳದ ಸಬ್ಇನ್ಸ್ಪೆಕ್ಟರ್ ವೀಣಾ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಸಿಬ್ಬಂದಿ ಕೆ.ಬಿ.ಸೋಮಣ್ಣ, ಟಿ.ಪಿ.ಮಂಜುನಾಥ್, ಪಿ.ಬಿ.ಮೊಣ್ಣಪ್ಪ ಎಂ.ಬಿ.ಗಣೇಶ್ ಮತ್ತು ಎಸ್.ಎಂ.ಯೋಗೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>