ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಮೂವರು ಸಾವು; ಇಬ್ಬರಿಗೆ ಗಾಯ

Last Updated 5 ಮೇ 2021, 14:37 IST
ಅಕ್ಷರ ಗಾತ್ರ

ವಿಜಯಪುರ: ನಗರದ ಟಕ್ಕೆ ಬಳಿ ಮಸೀದಿ ಬಳಿ ಬುಧವಾರ ಸಂಜೆ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಅಶೋಕರಾಮ ಕಾರಜೋಳ(48), ಬಾಷಾಸಾಬ್‌ ಕರಜಗಿ(40) ಮತ್ತು ಜಾವಿದ್‌ ಹಾಜಿಸಾಬ್‌ ಜಾಲಗೇರಿ(33) ಸಾವಿಗೀಡಾಗಿದ್ದಾರೆ.

ಸಬೀನಾ ಮತ್ತು ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಲದಿಂದ ಬರುವ ವೇಳೆ ಗಾಳಿ, ಮಳೆ ಆರಂಭವಾದ ಕಾರಣ ರಕ್ಷಣೆಗಾಗಿ ಟಕ್ಕೆ ದರ್ಗಾ ಬಳಿ ಇರುವ ಮಸೀದಿ ಆವರಣದಲ್ಲಿ ರಕ್ಷಣೆ ಪಡೆದುಕೊಂಡಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಡಿದಿದೆ ಎಂದು ವಿಜಯಪುರ ಗ್ರಾಮೀಣ ಠಾಣೆ ಪಿಎಸ್‌ಐ ಆನಂದ ಟಕ್ಕನವರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT