ಮಡಿಕೇರಿ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿ ಹಾಲಿನ ವ್ಯಾನ್ ಚಾಲಕ ಸೂರ್ಯನಾಯಕ ಎಂಬಾತನಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು 3 ವರ್ಷ ಸಜೆ ಮತ್ತು ₹ 15 ಸಾವಿರ ದಂಡ ವಿಧಿಸಿಧೆ.
2019ರ ಡಿಸೆಂಬರ್ 10ರಂದು ಶಾಲೆಗೆಂದು ತೋಟದ ಕಾಲು ದಾರಿಯಲ್ಲಿ ಹೋಗುತ್ತಿದ್ದ ಬಾಲಕಿಯ ಮೇಲೆ ಈತ ಅತ್ಯಾಚಾರಕ್ಕೆ ಯತ್ನಿಸಿದ್ದ. ಪೊಲೀಸರು ಈತನನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಎಚ್.ಸಿ.ಶಾಮ್ ಪ್ರಸಾದ್ ಶಿಕ್ಷೆ ವಿಧಿಸಿದರು.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್.ರುದ್ರ ಪ್ರಸನ್ನ ವಾದ ಮಂಡಿಸಿದ್ದರು.