‘ಕಾರ್ಮಿಕನ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಗ್ರಾಮಸ್ಥರು ಭೀತಿಗೆ ಒಳಗಾಗಿದ್ದಾರೆ. ದುರಂತಕ್ಕೆ ಹೊಣೆಯಾಗಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮನು ಸೋಮಯ್ಯ ಡಿವೈಎಸ್ಪಿ ಜಯಕುಮಾರ್ ಅವರಿಗೆ ದೂರು ನೀಡಿದರು. ಡಿವೈಎಸ್ಪಿ ಕ್ರಮದ ಭರವಸೆ ನೀಡಿದರು.