<p><strong>ಗೋಣಿಕೊಪ್ಪಲು</strong>: ಪೊನ್ನಂಪೇಟೆ ತಾಲ್ಲೂಕಿನ ತೆರಾಲು ಗ್ರಾಮದಲ್ಲಿ ಹುಲಿ ಸೆರೆಗೆ ಅರಣ್ಯ ಇಲಾಖೆ ಎರಡು ಸಾಕಾನೆಗಳ ಸಹಾಯದೊಂದಿಗೆ ಕಳೆದ ಶನಿವಾರದಿಂದ ಕಾರ್ಯಾಚರಣೆ ನಡೆಸುತ್ತಿರುವ ಬೆನ್ನಲ್ಲೆ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕರು ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.</p>.<p> ಗ್ರಾಮದ ಬೊಳ್ಳೇರ ಎಂ.ಚಿಣ್ಣಪ್ಪ ಕೊಟ್ಟಿಗೆಗೆ ಗುರುವಾರ ಮುಂಜಾನೆ ಆರು ಗಂಟೆ ವೇಳೆಗೆ ಹಸು ಅರಚುವ ಶಬ್ದ ಕೇಳಿ ನೋಡಿದಾಗ ಕರುವನ್ನು ಹುಲಿ ಎಳೆದೊಯ್ದಿರುವುದು ಕಂಡು ಬಂದಿದೆ.<br> ನಂತರ ಪರಿಶೀಲನೆ ನಡೆಸಿದಾಗ ಸಮೀಪದ ಕಾಫಿ ತೋಟದ ಹಳ್ಳದಲ್ಲಿ ಕರುವನ್ನು ಭಾಗಶಃ ತಿಂದು ಹಾಕಿದೆ.<br> ಸುದ್ದಿ ತಿಳಿದೊಡನೆ ಸ್ಥಳಕ್ಕೆ ರಾಜ್ಯ ವನ್ಯಜೀವಿ ಸಂಘದ ಸದಸ್ಯ ಸಂಕೇತ್ ಪೂವಯ್ಯ, ಕಾರ್ಯಾಚರಣೆ ಸ್ಥಳ್ಕೆ ಭೇಟಿ ನೀಡಿ ಸ್ಥಳ ಬದಲಾಯಿಸುವಂತೆ ಸೂಚಿಸಿದರು. ಜತೆಗೆ ಸುತ್ತಮುತ್ತ ಕ್ಯಾಮರಾ ಅಳವಡಿಸುವಂತೆ ಹೇಳಿದರು.</p>.<p>ಈ ಹಿನ್ನೆಲೆ ಅರಣ್ಯ ಇಲಾಖೆ ಕಾರ್ಯಾಚರಣೆ ತಂಡ ಹಲವು ಕ್ಯಾಮರಾ ಅಳವಡಿಸಿದ್ದು 14 ಆಡಿ ಅಟ್ಟಣಿಗೆ ನಿರ್ಮಿಸಿ ಹುಲಿ ಅರವಳಿಕೆ ನೀಡುವ ಗುಂಡು ಹಾರಿಸಿ ಸೆರೆ ಹಿಡಿಯಲು ಅಥವಾ ಚಲನವಲನ ಗುರುತಿಸಲು ಕ್ರಮ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಪೊನ್ನಂಪೇಟೆ ತಾಲ್ಲೂಕಿನ ತೆರಾಲು ಗ್ರಾಮದಲ್ಲಿ ಹುಲಿ ಸೆರೆಗೆ ಅರಣ್ಯ ಇಲಾಖೆ ಎರಡು ಸಾಕಾನೆಗಳ ಸಹಾಯದೊಂದಿಗೆ ಕಳೆದ ಶನಿವಾರದಿಂದ ಕಾರ್ಯಾಚರಣೆ ನಡೆಸುತ್ತಿರುವ ಬೆನ್ನಲ್ಲೆ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕರು ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.</p>.<p> ಗ್ರಾಮದ ಬೊಳ್ಳೇರ ಎಂ.ಚಿಣ್ಣಪ್ಪ ಕೊಟ್ಟಿಗೆಗೆ ಗುರುವಾರ ಮುಂಜಾನೆ ಆರು ಗಂಟೆ ವೇಳೆಗೆ ಹಸು ಅರಚುವ ಶಬ್ದ ಕೇಳಿ ನೋಡಿದಾಗ ಕರುವನ್ನು ಹುಲಿ ಎಳೆದೊಯ್ದಿರುವುದು ಕಂಡು ಬಂದಿದೆ.<br> ನಂತರ ಪರಿಶೀಲನೆ ನಡೆಸಿದಾಗ ಸಮೀಪದ ಕಾಫಿ ತೋಟದ ಹಳ್ಳದಲ್ಲಿ ಕರುವನ್ನು ಭಾಗಶಃ ತಿಂದು ಹಾಕಿದೆ.<br> ಸುದ್ದಿ ತಿಳಿದೊಡನೆ ಸ್ಥಳಕ್ಕೆ ರಾಜ್ಯ ವನ್ಯಜೀವಿ ಸಂಘದ ಸದಸ್ಯ ಸಂಕೇತ್ ಪೂವಯ್ಯ, ಕಾರ್ಯಾಚರಣೆ ಸ್ಥಳ್ಕೆ ಭೇಟಿ ನೀಡಿ ಸ್ಥಳ ಬದಲಾಯಿಸುವಂತೆ ಸೂಚಿಸಿದರು. ಜತೆಗೆ ಸುತ್ತಮುತ್ತ ಕ್ಯಾಮರಾ ಅಳವಡಿಸುವಂತೆ ಹೇಳಿದರು.</p>.<p>ಈ ಹಿನ್ನೆಲೆ ಅರಣ್ಯ ಇಲಾಖೆ ಕಾರ್ಯಾಚರಣೆ ತಂಡ ಹಲವು ಕ್ಯಾಮರಾ ಅಳವಡಿಸಿದ್ದು 14 ಆಡಿ ಅಟ್ಟಣಿಗೆ ನಿರ್ಮಿಸಿ ಹುಲಿ ಅರವಳಿಕೆ ನೀಡುವ ಗುಂಡು ಹಾರಿಸಿ ಸೆರೆ ಹಿಡಿಯಲು ಅಥವಾ ಚಲನವಲನ ಗುರುತಿಸಲು ಕ್ರಮ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>