<p><strong>ಕುಶಾಲನಗರ</strong>: ಸೋಮವಾರಪೇಟೆ ತಾಲ್ಲೂಕಿನ ಎಡವನಾಡು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯ ಹುದುಗೂರು ಹಾಗೂ ಅರೆಯೂರು ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.</p>.<p>ಯಲಕನೂರು, ಅರೆಯೂರು ವ್ಯಾಪ್ತಿಯಲ್ಲಿ ಒಂದು ವಾರದಿಂದ ಹುಲಿಯ ಹೆಜ್ಜೆ ಗುರುತು ಕಂಡುಬಂದಿದೆ.</p>.<p>ಈಚೆಗೆ ಅರೆಯೂರು ಗ್ರಾಮದ ಸಿ.ಎನ್.ಈರಪ್ಪ ಎಂಬವರ ಕಾಫಿ ತೋಟದ ಕೊಟ್ಟಗೆಯಲ್ಲಿ ಕಟ್ಟಲಾಗಿದ್ದ ಎತ್ತನ್ನು ಹುಲಿ ಎಳೆದುಕೊಂಡು ಹೋಗಿ ಸಮೀಪದ ಮೀಸಲು ಅರಣ್ಯದಲ್ಲಿ ತಿಂದು ಹೋಗಿತ್ತು.</p>.<p>ಸೋಮವಾರಪೇಟೆ ಎಸಿಎಫ್ ನೆಹರು, ವಲಯ ಅರಣ್ಯಾಧಿಕಾರಿ ಶಮಾ ಸೇರಿದಂತೆ ಹುದುಗೂರು ಮತ್ತು ಬಾಣವಾರ ಉಪ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.</p>.<p>ಸಿ.ಎನ್.ಈರಪ್ಪ ಅವರು ವಿಷಯವನ್ನು ಶಾಸಕ ಅಪ್ಪಚ್ಚು ರಂಜನ್ ಅವರ ಗಮನಕ್ಕೆ ತಂದಿದ್ದರು.</p>.<p>ಹುಲಿ ಸೆರೆಗೆ ಬೋನ್ ಅಳವಡಿಸುವಂತೆ ತಾಲ್ಲೂಕು ಅರಣ್ಯ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದ ಮೇರೆಗೆ ಅರೆಯೂರು ಮೀಸಲು ಪ್ರದೇಶ ಅಂಚಿನ ಈರಪ್ಪ ಅವರ ಕಾಫಿ ತೋಟದಲ್ಲಿ ಬೋನ್ ಇಡಲಾಗಿದೆ. ಬೋನ್ ಒಳಗೆ ನಾಯಿಯನ್ನು ಕಟ್ಟಲಾಗುತ್ತಿದೆ.</p>.<p>ಅರೆಯೂರು ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮ. ಕಳೆದ ವಾರ ಹುದುಗೂರು ಸಮೀಪದ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ನೋಡಿ ಈ ವ್ಯಾಪ್ತಿಯ ರೈತರು ಮತ್ತು ಹಾಡಿಯ ಜನರು ಭಯಭೀತರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಸೋಮವಾರಪೇಟೆ ತಾಲ್ಲೂಕಿನ ಎಡವನಾಡು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯ ಹುದುಗೂರು ಹಾಗೂ ಅರೆಯೂರು ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.</p>.<p>ಯಲಕನೂರು, ಅರೆಯೂರು ವ್ಯಾಪ್ತಿಯಲ್ಲಿ ಒಂದು ವಾರದಿಂದ ಹುಲಿಯ ಹೆಜ್ಜೆ ಗುರುತು ಕಂಡುಬಂದಿದೆ.</p>.<p>ಈಚೆಗೆ ಅರೆಯೂರು ಗ್ರಾಮದ ಸಿ.ಎನ್.ಈರಪ್ಪ ಎಂಬವರ ಕಾಫಿ ತೋಟದ ಕೊಟ್ಟಗೆಯಲ್ಲಿ ಕಟ್ಟಲಾಗಿದ್ದ ಎತ್ತನ್ನು ಹುಲಿ ಎಳೆದುಕೊಂಡು ಹೋಗಿ ಸಮೀಪದ ಮೀಸಲು ಅರಣ್ಯದಲ್ಲಿ ತಿಂದು ಹೋಗಿತ್ತು.</p>.<p>ಸೋಮವಾರಪೇಟೆ ಎಸಿಎಫ್ ನೆಹರು, ವಲಯ ಅರಣ್ಯಾಧಿಕಾರಿ ಶಮಾ ಸೇರಿದಂತೆ ಹುದುಗೂರು ಮತ್ತು ಬಾಣವಾರ ಉಪ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.</p>.<p>ಸಿ.ಎನ್.ಈರಪ್ಪ ಅವರು ವಿಷಯವನ್ನು ಶಾಸಕ ಅಪ್ಪಚ್ಚು ರಂಜನ್ ಅವರ ಗಮನಕ್ಕೆ ತಂದಿದ್ದರು.</p>.<p>ಹುಲಿ ಸೆರೆಗೆ ಬೋನ್ ಅಳವಡಿಸುವಂತೆ ತಾಲ್ಲೂಕು ಅರಣ್ಯ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದ ಮೇರೆಗೆ ಅರೆಯೂರು ಮೀಸಲು ಪ್ರದೇಶ ಅಂಚಿನ ಈರಪ್ಪ ಅವರ ಕಾಫಿ ತೋಟದಲ್ಲಿ ಬೋನ್ ಇಡಲಾಗಿದೆ. ಬೋನ್ ಒಳಗೆ ನಾಯಿಯನ್ನು ಕಟ್ಟಲಾಗುತ್ತಿದೆ.</p>.<p>ಅರೆಯೂರು ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮ. ಕಳೆದ ವಾರ ಹುದುಗೂರು ಸಮೀಪದ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ನೋಡಿ ಈ ವ್ಯಾಪ್ತಿಯ ರೈತರು ಮತ್ತು ಹಾಡಿಯ ಜನರು ಭಯಭೀತರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>