<p><strong>ಗೋಣಿಕೊಪ್ಪಲು</strong>: ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಾನುವಾರುಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಚರುಕುಗೊಂಡಿದೆ.</p>.<p>ಡಿಸಿಎಫ್ ಜಗನ್ನಾಥ್, ಎಸಿಎಫ್ ಗೋಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಹುದಿಕೇರಿ, ಹರಿಹರ, ಕೋಣಂಗೇರಿ, ಬೆಳ್ಳೂರು, ಟಿ.ಶೆಟ್ಟಿಗೇರಿ ಕಡೆಗಳಲ್ಲಿ ನಡೆಯುತ್ತಿದೆ.</p>.<p>ಹುಲಿ ಹೆಜ್ಜೆಜಾಡು ಪತ್ತೆ ಹಚ್ಚಿ ಅದನ್ನು ಸೆರೆ ಹಿಡಿಯುವ ಅಥವಾ ಕಾಡಿಗೆ ಅಟ್ಟುವ ಕಾರ್ಯಾಚರಣೆ ಸುರಿಯುತ್ತಿರುವ ಮಳೆಯ ನಡುವೆಯೂ ಮುಂದುವರಿದಿದೆ. ಮತ್ತಿಗೋಡು ಸಾಕಾನೆ ಶಿಬಿರದ ಮಹೇಂದ್ರ ಹಾಗೂ ಭೀಮ ಆನೆಗಳನ್ನು ಇದಕ್ಕಾಗಿ ಬಳಸಿಕೊಳ್ಳಲಾಗಿದೆ.</p>.<p>ಅರವಳಿಕೆ ತಜ್ಞ ಡಾ. ರಮೇಶ್, ಭೀಮ ಆನೆಯ ಮಾವುತ ಗುಂಡಣ್ಣ, ಮಹೇಂದ್ರ ಆನೆಯ ಮಾವುತ ಮಲ್ಲಿಕಾರ್ಜುನ ಕಾಫಿ ತೋಟದ ನಡುವೆ ಹುಲಿ ಹೆಜ್ಜೆ ಗುರುತು ಹಿಡಿದು ಆನೆಗಳನ್ನು ಮುನ್ನಡೆಸುತ್ತಿದ್ದಾರೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಫ್ ಜನ್ನಾಥ್, ಅರಣ್ಯ ಇಲಾಖೆ ಸಿಬ್ಬಂದಿ, ಕಾವಾಡಿಗರು, ಆರ್ಆರ್ಟಿ ತಂಡ ಸೇರಿದಂತೆ ಒಟ್ಟು 80 ಮಂದಿ ಕಾರ್ಯಾಚರಣೆಯಲ್ಲಿದ್ದಾರೆ. ಶೀಘ್ರದಲ್ಲಿಯೇ ಹುಲಿ ಸೆರೆ ಹಿಡಿದ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು.</p>.<p>ವಲಯ ಅರಣ್ಯಾಧಿಕಾರಿಗಳಾದ ಶಂಕರ್, ರಂಜನ್, ಉಪ ವಲಯ ಅರಣ್ಯಾಧಿಕಾರಿ ನಾಗೇಶ್, ಸಂದೇಶ್, ಶ್ರೀಧರ್, ದಿವಾಕರ್, ರಕ್ಷಿತ್, ಭರತ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯ ಬೋಸ್ ಮಾದಪ್ಪ ಕಾರ್ಯಾಚರಣೆಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಾನುವಾರುಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಚರುಕುಗೊಂಡಿದೆ.</p>.<p>ಡಿಸಿಎಫ್ ಜಗನ್ನಾಥ್, ಎಸಿಎಫ್ ಗೋಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಹುದಿಕೇರಿ, ಹರಿಹರ, ಕೋಣಂಗೇರಿ, ಬೆಳ್ಳೂರು, ಟಿ.ಶೆಟ್ಟಿಗೇರಿ ಕಡೆಗಳಲ್ಲಿ ನಡೆಯುತ್ತಿದೆ.</p>.<p>ಹುಲಿ ಹೆಜ್ಜೆಜಾಡು ಪತ್ತೆ ಹಚ್ಚಿ ಅದನ್ನು ಸೆರೆ ಹಿಡಿಯುವ ಅಥವಾ ಕಾಡಿಗೆ ಅಟ್ಟುವ ಕಾರ್ಯಾಚರಣೆ ಸುರಿಯುತ್ತಿರುವ ಮಳೆಯ ನಡುವೆಯೂ ಮುಂದುವರಿದಿದೆ. ಮತ್ತಿಗೋಡು ಸಾಕಾನೆ ಶಿಬಿರದ ಮಹೇಂದ್ರ ಹಾಗೂ ಭೀಮ ಆನೆಗಳನ್ನು ಇದಕ್ಕಾಗಿ ಬಳಸಿಕೊಳ್ಳಲಾಗಿದೆ.</p>.<p>ಅರವಳಿಕೆ ತಜ್ಞ ಡಾ. ರಮೇಶ್, ಭೀಮ ಆನೆಯ ಮಾವುತ ಗುಂಡಣ್ಣ, ಮಹೇಂದ್ರ ಆನೆಯ ಮಾವುತ ಮಲ್ಲಿಕಾರ್ಜುನ ಕಾಫಿ ತೋಟದ ನಡುವೆ ಹುಲಿ ಹೆಜ್ಜೆ ಗುರುತು ಹಿಡಿದು ಆನೆಗಳನ್ನು ಮುನ್ನಡೆಸುತ್ತಿದ್ದಾರೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಫ್ ಜನ್ನಾಥ್, ಅರಣ್ಯ ಇಲಾಖೆ ಸಿಬ್ಬಂದಿ, ಕಾವಾಡಿಗರು, ಆರ್ಆರ್ಟಿ ತಂಡ ಸೇರಿದಂತೆ ಒಟ್ಟು 80 ಮಂದಿ ಕಾರ್ಯಾಚರಣೆಯಲ್ಲಿದ್ದಾರೆ. ಶೀಘ್ರದಲ್ಲಿಯೇ ಹುಲಿ ಸೆರೆ ಹಿಡಿದ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು.</p>.<p>ವಲಯ ಅರಣ್ಯಾಧಿಕಾರಿಗಳಾದ ಶಂಕರ್, ರಂಜನ್, ಉಪ ವಲಯ ಅರಣ್ಯಾಧಿಕಾರಿ ನಾಗೇಶ್, ಸಂದೇಶ್, ಶ್ರೀಧರ್, ದಿವಾಕರ್, ರಕ್ಷಿತ್, ಭರತ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯ ಬೋಸ್ ಮಾದಪ್ಪ ಕಾರ್ಯಾಚರಣೆಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>