ವಿರಾಜಪೇಟೆ ತಾಲ್ಲೂಕಿನ ಕುಮಟೂರು, ನಡಿಕೇರಿ, ತೂಚಮಕೇರಿ, ಟಿ.ಶೆಟ್ಟಿಗೇರಿ ಭಾಗಗಳಲ್ಲಿ ಏಪ್ರಿಲ್ ಕೊನೆಯಲ್ಲಿ ಹುಲಿ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು. ಆದರೆ, ಹುಲಿ ಸೆರೆ ಸಾಧ್ಯವಾಗಿರಲಿಲ್ಲ. ಕಳೆದ ಇಪ್ಪತ್ತು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಸಾಕಾನೆ ಬಳಸಿಕೊಂಡು ಕಾರ್ಯಾಚರಣೆಗೆ ಮುಂದಾಗಿತ್ತು. ಅದೂ ಫಲಪ್ರದವಾಗಿರಲಿಲ್ಲ.