<p><strong>ಸುಂಟಿಕೊಪ್ಪ:</strong> ಇಲ್ಲಿಗೆ ಸಮೀಪದ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ.</p>.<p>ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ಹೆಜ್ಜೆ ಗುರುತು ಪತ್ತೆಯಾಗಿರುವ ಸ್ಥಳ ಜಿಲ್ಲಾ ಕೇಂದ್ರ ಮಡಿಕೇರಿಗೆ ಕೇವಲ 12 ಕಿ.ಮೀ ದೂರದಲ್ಲಿದ್ದು, ಆತಂಕ ಮತ್ತಷ್ಟು ಹೆಚ್ಚಿದೆ.</p>.<p>ಸಮೀಪದ 7ನೇ ಹೊಸಕೋಟೆ, ಕೆದಕಲ್, ಹೊರೂರು, ಕೊಡಗರಹಳ್ಳಿ ಕಂಬಿಬಾಣೆ ಚಿಕ್ಲಿಹೊಳೆ ಭಾಗಗಳಲ್ಲಿ ತೋಟದ ಮಾಲೀಕರು, ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಭಯ ಪಡುವಂತಾಗಿದೆ.</p>.<p>ಈಗಾಗಲೇ ಈ ವ್ಯಾಪ್ತಿಯಲ್ಲಿ ದಿನನಿತ್ಯ ಆನೆಗಳ ಸಂಚಾರ ಮತ್ತು ಹಾವಳಿ ನಿರಂತರವಾಗಿದೆ. ಇದೀಗ ಹುಲಿ ಸಂಚಾರದ ಹೆಜ್ಜೆ ಗುರುತುಗಳೂ ಪತ್ತೆಯಾಗಿರುವುದು ಜನರಲ್ಲಿ ತಲ್ಲಣ ಸೃಷ್ಟಿಸಿದೆ. ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆಯು ಕೂಡಲೇ ಎಚ್ಚೆತುಕೊಳ್ಳಬೇಕಿದೆ.</p>.<p>ಕೊಡಗರಹಳ್ಳಿ ಕೆದಕಲ್, ಹೊರೂರು, ಮೋದೂರು, ಕಂಬಿಬಾಣೆ, ಚಿಕ್ಲಿಹೊಳೆ, 7ನೇ ಹೊಸಕೋಟೆ ಭಾಗಗಳಲ್ಲಿ ಶಾಲೆಗಳಿದ್ದು, ಮಕ್ಕಳು ವಿದ್ಯಾಭ್ಯಾಸಕ್ಕಾಗಿ ವಿವಿಧ ಭಾಗಗಳಿಂದ ಆಗಮಿಸಿ ಶಿಕ್ಷಣ ಪಡೆಯುತ್ತಿದ್ದಾರೆ. ಇದೀಗ ಶಾಲೆಗಳಿಗೆ ಕಳುಹಿಸಲು ಪೋಷಕರು ಆತಂಕಗೊಂಡಿದ್ದಾರೆ.</p>.<p>ಈ ಬಗ್ಗೆ ಸಂಸದರು, ಶಾಸಕರು, ಉಸ್ತುವಾರಿ ಸಚಿವರು, ಇಲಾಖೆಯ ನೋಡಲ್ ಅಧಿಕಾರಿ, ಉಸ್ತುವಾರಿ ಕಾರ್ಯದರ್ಶಿ ಈ ಸಮಸ್ಯೆ ಕುರಿತು ಅದ್ಯತೆ ಮೇರೆಗೆ ಪ್ರಮುಖವಾಗಿ ಗಂಭೀರವಾದ ಚರ್ಚೆಗಳು ನಡೆಸಬೇಕಾದ ತುರ್ತು ಅವಶ್ಯಕತೆ ಇದೆ ಎಂದು ಕೃಷಿಕರಾದ ಬಿ.ಸಿ.ದಿನೇಶ್, ತಿಮ್ಮಪ್ಪ, ದೇವಿಪ್ರಸಾದ್ ಇತರರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಇಲ್ಲಿಗೆ ಸಮೀಪದ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ.</p>.<p>ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ಹೆಜ್ಜೆ ಗುರುತು ಪತ್ತೆಯಾಗಿರುವ ಸ್ಥಳ ಜಿಲ್ಲಾ ಕೇಂದ್ರ ಮಡಿಕೇರಿಗೆ ಕೇವಲ 12 ಕಿ.ಮೀ ದೂರದಲ್ಲಿದ್ದು, ಆತಂಕ ಮತ್ತಷ್ಟು ಹೆಚ್ಚಿದೆ.</p>.<p>ಸಮೀಪದ 7ನೇ ಹೊಸಕೋಟೆ, ಕೆದಕಲ್, ಹೊರೂರು, ಕೊಡಗರಹಳ್ಳಿ ಕಂಬಿಬಾಣೆ ಚಿಕ್ಲಿಹೊಳೆ ಭಾಗಗಳಲ್ಲಿ ತೋಟದ ಮಾಲೀಕರು, ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಭಯ ಪಡುವಂತಾಗಿದೆ.</p>.<p>ಈಗಾಗಲೇ ಈ ವ್ಯಾಪ್ತಿಯಲ್ಲಿ ದಿನನಿತ್ಯ ಆನೆಗಳ ಸಂಚಾರ ಮತ್ತು ಹಾವಳಿ ನಿರಂತರವಾಗಿದೆ. ಇದೀಗ ಹುಲಿ ಸಂಚಾರದ ಹೆಜ್ಜೆ ಗುರುತುಗಳೂ ಪತ್ತೆಯಾಗಿರುವುದು ಜನರಲ್ಲಿ ತಲ್ಲಣ ಸೃಷ್ಟಿಸಿದೆ. ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆಯು ಕೂಡಲೇ ಎಚ್ಚೆತುಕೊಳ್ಳಬೇಕಿದೆ.</p>.<p>ಕೊಡಗರಹಳ್ಳಿ ಕೆದಕಲ್, ಹೊರೂರು, ಮೋದೂರು, ಕಂಬಿಬಾಣೆ, ಚಿಕ್ಲಿಹೊಳೆ, 7ನೇ ಹೊಸಕೋಟೆ ಭಾಗಗಳಲ್ಲಿ ಶಾಲೆಗಳಿದ್ದು, ಮಕ್ಕಳು ವಿದ್ಯಾಭ್ಯಾಸಕ್ಕಾಗಿ ವಿವಿಧ ಭಾಗಗಳಿಂದ ಆಗಮಿಸಿ ಶಿಕ್ಷಣ ಪಡೆಯುತ್ತಿದ್ದಾರೆ. ಇದೀಗ ಶಾಲೆಗಳಿಗೆ ಕಳುಹಿಸಲು ಪೋಷಕರು ಆತಂಕಗೊಂಡಿದ್ದಾರೆ.</p>.<p>ಈ ಬಗ್ಗೆ ಸಂಸದರು, ಶಾಸಕರು, ಉಸ್ತುವಾರಿ ಸಚಿವರು, ಇಲಾಖೆಯ ನೋಡಲ್ ಅಧಿಕಾರಿ, ಉಸ್ತುವಾರಿ ಕಾರ್ಯದರ್ಶಿ ಈ ಸಮಸ್ಯೆ ಕುರಿತು ಅದ್ಯತೆ ಮೇರೆಗೆ ಪ್ರಮುಖವಾಗಿ ಗಂಭೀರವಾದ ಚರ್ಚೆಗಳು ನಡೆಸಬೇಕಾದ ತುರ್ತು ಅವಶ್ಯಕತೆ ಇದೆ ಎಂದು ಕೃಷಿಕರಾದ ಬಿ.ಸಿ.ದಿನೇಶ್, ತಿಮ್ಮಪ್ಪ, ದೇವಿಪ್ರಸಾದ್ ಇತರರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>