ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿರುವ ನಿಷೇಧಾಜ್ಞೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಅಲ್ಪಮಟ್ಟಿನ ಸಡಿಲಿಕೆ ಮಾಡಲಾಗಿದೆ.
ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಲು, ದಿನಪತ್ರಿಕೆ, ತರಕಾರಿ, ದಿನಸಿ ಸಾಮಗ್ರಿ ಖರೀದಿಸಲು ಸಾರ್ವಜನಿಕರಿಗೆ ಮತ್ತು ಮಾರಾಟ ಮಳಿಗೆ ತೆರೆಯಲು ವಿತರಕರಿಗೆ ಅವಕಾಶವಿರುತ್ತದೆ.
ಅಗತ್ಯ ವಸ್ತುಗಳನ್ನು ಖರೀದಿಸಲು ಸಮಯವನ್ನು ವಿಸ್ತರಿಸಲಾಗಿದ್ದು, ಸಾರ್ವಜನಿಕರು ಅವಸರ ಪಡದೆ, ಗುಂಪುಗೂಡದೆ, ಕನಿಷ್ಠ 1 ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಂಡು ನಿರ್ಭೀತಿಯಿಂದ ಖರೀದಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇದಕ್ಕೂ ಮೊದಲು ಬೆಳಿಗ್ಗೆ 6ರಿಂದ 8ರ ತನಕ ಹಾಲು, ದಿನಪತ್ರಿಕೆ ಖರೀದಿ ಹಾಗೂ ಮಧ್ಯಾಹ್ನ 12ರಿಂದ 2ರ ತನಕ ದಿನಸಿ ಹಾಗೂ ತರಕಾರಿ ಖರೀದಿಗೆ ಅವಕಾಶ ನೀಡಲಾಗಿತ್ತು.