ಚೆಕ್ಪೋಸ್ಟ್ ಆರಂಭ:2015ರಲ್ಲಿ ನಡೆದಿದ್ದ ಗಲಭೆಗೆ ಹೊರ ರಾಜ್ಯದಿಂದ ಬಂದವರು ಕಾರಣವೆಂಬ ಆರೋಪ ಕೇಳಿಬಂದಿತ್ತು. ಹೀಗಾಗಿ, ಕೇರಳದ ಕಣ್ಣೂರು, ಕಾಸರಗೋಡು ಚೆಕ್ಪೋಸ್ಟ್ಗಳಲ್ಲಿ ತೀವ್ರ ನಿಗಾ ವಹಿಸಲು ಮಾಹಿತಿ ಪಡೆಯಲಾಗಿದೆ. ಜಿಲ್ಲೆಯ ಗಡಿಭಾಗಗಳಾದ ಮಾಲ್ದಾರೆ, ಕುಟ್ಟ, ಆನೆಚೌಕೂರು, ಸಿದ್ದಾಪುರ, ಕೊಪ್ಪ, ಶಿರಂಗಾಲ, ಕೊಡ್ಲಿಪೇಟೆ, ಶನಿವಾರಸಂತೆ, ಸಂಪಾಜೆಯಲ್ಲಿ ಚೆಕ್ಪೋಸ್ಟ್ಗಳಿದ್ದು, ಭದ್ರತೆ ಹೆಚ್ಚಿಸಲು ಪೊಲೀಸರು ಮುಂದಾಗಿದ್ದಾರೆ.