ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಆಯೋಗದ ಆಯುಕ್ತರಾದ ಡಾ.ಮನೋಜ್ ರಾಜನ್ ಮಾತನಾಡಿ, ‘ಮುಂದಿನ ಒಂದು ವಾರ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಭೂಕುಸಿತ ಪ್ರದೇಶಗಳಲ್ಲಿನ ಜನರಿಗೆ ಮಾಹಿತಿ ನೀಡಿ, ಸ್ಥಳಾಂತರಿಸಬೇಕು. ಸಹಾಯವಾಣಿ ಕೇಂದ್ರಗಳು ಸಂಪರ್ಕದಲ್ಲಿರಬೇಕು. ಎಸ್ಡಿಆರ್ಎಫ್, ಎನ್ಡಿಆರ್ಎಫ್ ಹಾಗೂ ಅಧಿಕಾರಿಗಳ ತಂಡಗಳು ಎಚ್ಚರದಿಂದಿರಬೇಕು’ ಎಂದು ತಿಳಿಸಿದರು