ಮಡಿಕೇರಿ: ಕ್ರಿಸ್ಮಸ್ ಹಾಗೂ ವರ್ಷಾಂತ್ಯದ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರು ದಂಡೇ ಹರಿದುಬರುತ್ತಿದೆ. ರಾಜಾಸೀಟ್, ಓಂಕಾರೇಶ್ವರ ದೇಗುಲ, ಅಬ್ಬಿ ಜಲಪಾತ, ಕೋಟೆ, ಕುಶಾಲನಗರ ಸಮೀಪದ ನಿಸರ್ಗಧಾಮ, ದುಬಾರೆ, ಹಾರಂಗಿ ಜಲಾಶಯ, ತಲಕಾವೇರಿ, ಭಾಗಮಂಡಲ, ಇರ್ಪುದಂತಹ ಪ್ರವಾಸಿ ತಾಣಗಳಲ್ಲಿ ಕಳೆದ ಶನಿವಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬರುತ್ತಿದ್ದಾರೆ.