ಮೇ 3ರಂದು ಸರಕು ಸಾಗಣೆ ವಾಹನದಲ್ಲಿ ಜನರನ್ನು ಕರೆದೊಯ್ಯುತ್ತಿದ್ದಾಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ತಡೆದು ನಿಲ್ಲಿಸಿದ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಪರಶಿವಮೂರ್ತಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಆದರೆ, ಅಗತ್ಯ ದಾಖಲೆ ಇರಲಿಲ್ಲ. ಜತೆಗೆ ಭರತ್ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಹೀಗಾಗಿ, ಪೊಲೀಸರು ವಾಹನವನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದರು.