<p><strong>ಮಡಿಕೇರಿ</strong>: ಕಾಡಂಚಿನಲ್ಲಿ ವಾಸಿಸುವ ಜನರಿಗೆ ಸುರಕ್ಷತೆ ಒದಗಿಸುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಾಲು ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ‘ಹುಲಿ ಹಿಡಿಯುವ ಕಾರ್ಯಾಚರಣೆ’ ಸ್ಥಳಕ್ಕೆ ಅವರು ಮಂಗಳವಾರ ಭೇಟಿ ನೀಡಿ ವೀಕ್ಷಿಸಿ ಈ ಸೂಚನೆ ನೀಡಿದರು.</p>.<p>‘ಬಡವರು, ಆದಿವಾಸಿಗಳು ಸಹ ವಾಸಿಸಬೇಕು. ಆ ನಿಟ್ಟಿನಲ್ಲಿ ಅವರಿಗೆ ಭೂಮಿ ಒದಗಿಸಬೇಕು. ಆದಿವಾಸಿಗಳಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಭರವಸೆ ನೀಡಲಾಗಿದೆ. ಅದರಂತೆ ನಡೆದುಕೊಳ್ಳಬೇಕು. ಮಾನವೀಯತೆಯಿಂದ ನೋಡಬೇಕು’ ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು.</p>.<p>‘ಅರಣ್ಯ ಅಂಚಿನಲ್ಲಿಯೂ ಸಾಕಷ್ಟು ಭೂಮಿ ಒತ್ತುವರಿಯಾಗಿದೆ. ಆದಿವಾಸಿಗಳು, ಬಡವರಿಗೆ ಸಹ ವಾಸಕ್ಕೆ ಜಾಗ ಒದಗಿಸಬೇಕಿದೆ’ ಎಂದು ಹೇಳಿದರು.</p>.<p>‘ಹುಲಿ ಸೆರೆ ಕಾರ್ಯಾಚರಣೆಗೆ ದುಬಾರೆ ಸಾಕಾನೆ ಶಿಬಿರದಿಂದ ಗೋಪಿ ಮತ್ತು ಶ್ರೀರಾಮ ಎರಡು ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಈ ಸಂಬಂಧ 5 ದಿನಗಳಿಂದ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದರು.</p>.<p>‘ಈ ಸಂಬಂಧ ಅರಣ್ಯ ಸಚಿವರ ಜೊತೆ ಚರ್ಚಿಸಲಾಗಿದ್ದು, ಎರಡು ಹುಲಿಯನ್ನು ಸೆರೆ ಹಿಡಿಯಲು ಅನುಮತಿ ದೊರೆತಿದ್ದು, ಕಾರ್ಯಾಚರಣೆ ಆರಂಭವಾಗಿದೆ’ ಎಂದು ತಿಳಿಸಿದರು.</p>.<p>ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸೈನಿಕರಂತೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.</p>.<p>ಈ ವೇಳೆ ಜನರು ‘ತಕ್ಷಣ ಹುಲಿ ಸೆರೆ ಹಿಡಿಯಿರಿ, ನಮ್ಮನ್ನು ಕಾಪಾಡಿ’ ಎಂದು ಮೊರೆ ಇಟ್ಟರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು ಮಾತನಾಡಿ, ಅರಣ್ಯ ಅಧಿಕಾರಿಗಳು, ಪಿಡಿಒ ಹಾಗೂ ಸ್ಥಳೀಯರು ಒಳಗೊಂಡ ವಾಟ್ಸ್ಆ್ಯಪ್ ಗ್ರೂಪ್ ಮಾಡಿ, ತಕ್ಷಣವೇ ಮಾಹಿತಿ ನೀಡಿದ್ದಲ್ಲಿ ಹುಲಿ ಸೆರೆ ಹಿಡಿಯಲು ಸಹಕಾರಿಯಾಗುತ್ತದೆ. ಸ್ಥಳೀಯರು ಸಹಕಾರ ನೀಡಬೇಕು’ ಎಂದು ಕೋರಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿ, ‘ಇರ್ಪುವಿನಿಂದ ಕೂಟಿಯಾಲವರೆಗೂ ಹುಲಿಯ ಚಲನವಲನದ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಈ ಸಂಬಂಧ ಕ್ಯಾಂಪ್ಗಳನ್ನು ಮಾಡಿ ಹುಲಿ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಮಾಕುಟ್ಟ-ಶ್ರೀಮಂಗಲ ವನ್ಯಜೀವಿ ವಿಭಾಗ, ತಿತಿಮತಿ ಆರ್ಆರ್ಟಿ ವಿಭಾಗ ಹಾಗೂ ಇಟಿಎಫ್ ವಿಭಾಗ ಸೇರಿದಂತೆ ಒಟ್ಟು 60 ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ವಿವರಿಸಿದರು.</p>.<p>ವಲಯ ಅರಣ್ಯಾಧಿಕಾರಿ ಸಂತೋಷ್ ಹೂಗಾರ್, ಶಂಕರ್, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪ್ರಶಾಂತ್, ನವೀನ್, ಪ್ರೀತಮ್, ಅರಣ್ಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. </p>.<div><blockquote>ಬಿರುನಾಣಿ ಪಂಚಾಯಿತಿ ವ್ಯಾಪ್ತಿಯಲ್ಲಿ ಭಯದ ವಾತಾವರಣದಲ್ಲಿ ವಾಸಿಸುವಂತಾಗಿದೆ. ಹುಲಿ ಹಾಗೂ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.</blockquote><span class="attribution">–ರಾಜೇಶ್ ಬಿರುನಾಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷ</span></div>.<div><blockquote>ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ವನ್ಯಜೀವಿ ಹಾಗೂ ಮಾನವ ಸಂಘರ್ಷ ಇದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಶಾಸಕರು ಪ್ರಯತ್ನಿಸಿದ್ದಾರೆ.</blockquote><span class="attribution">–ಸಂಕೇತ್ ಪೂವಯ್ಯ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕಾಡಂಚಿನಲ್ಲಿ ವಾಸಿಸುವ ಜನರಿಗೆ ಸುರಕ್ಷತೆ ಒದಗಿಸುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಾಲು ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ‘ಹುಲಿ ಹಿಡಿಯುವ ಕಾರ್ಯಾಚರಣೆ’ ಸ್ಥಳಕ್ಕೆ ಅವರು ಮಂಗಳವಾರ ಭೇಟಿ ನೀಡಿ ವೀಕ್ಷಿಸಿ ಈ ಸೂಚನೆ ನೀಡಿದರು.</p>.<p>‘ಬಡವರು, ಆದಿವಾಸಿಗಳು ಸಹ ವಾಸಿಸಬೇಕು. ಆ ನಿಟ್ಟಿನಲ್ಲಿ ಅವರಿಗೆ ಭೂಮಿ ಒದಗಿಸಬೇಕು. ಆದಿವಾಸಿಗಳಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಭರವಸೆ ನೀಡಲಾಗಿದೆ. ಅದರಂತೆ ನಡೆದುಕೊಳ್ಳಬೇಕು. ಮಾನವೀಯತೆಯಿಂದ ನೋಡಬೇಕು’ ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು.</p>.<p>‘ಅರಣ್ಯ ಅಂಚಿನಲ್ಲಿಯೂ ಸಾಕಷ್ಟು ಭೂಮಿ ಒತ್ತುವರಿಯಾಗಿದೆ. ಆದಿವಾಸಿಗಳು, ಬಡವರಿಗೆ ಸಹ ವಾಸಕ್ಕೆ ಜಾಗ ಒದಗಿಸಬೇಕಿದೆ’ ಎಂದು ಹೇಳಿದರು.</p>.<p>‘ಹುಲಿ ಸೆರೆ ಕಾರ್ಯಾಚರಣೆಗೆ ದುಬಾರೆ ಸಾಕಾನೆ ಶಿಬಿರದಿಂದ ಗೋಪಿ ಮತ್ತು ಶ್ರೀರಾಮ ಎರಡು ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಈ ಸಂಬಂಧ 5 ದಿನಗಳಿಂದ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದರು.</p>.<p>‘ಈ ಸಂಬಂಧ ಅರಣ್ಯ ಸಚಿವರ ಜೊತೆ ಚರ್ಚಿಸಲಾಗಿದ್ದು, ಎರಡು ಹುಲಿಯನ್ನು ಸೆರೆ ಹಿಡಿಯಲು ಅನುಮತಿ ದೊರೆತಿದ್ದು, ಕಾರ್ಯಾಚರಣೆ ಆರಂಭವಾಗಿದೆ’ ಎಂದು ತಿಳಿಸಿದರು.</p>.<p>ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸೈನಿಕರಂತೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.</p>.<p>ಈ ವೇಳೆ ಜನರು ‘ತಕ್ಷಣ ಹುಲಿ ಸೆರೆ ಹಿಡಿಯಿರಿ, ನಮ್ಮನ್ನು ಕಾಪಾಡಿ’ ಎಂದು ಮೊರೆ ಇಟ್ಟರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು ಮಾತನಾಡಿ, ಅರಣ್ಯ ಅಧಿಕಾರಿಗಳು, ಪಿಡಿಒ ಹಾಗೂ ಸ್ಥಳೀಯರು ಒಳಗೊಂಡ ವಾಟ್ಸ್ಆ್ಯಪ್ ಗ್ರೂಪ್ ಮಾಡಿ, ತಕ್ಷಣವೇ ಮಾಹಿತಿ ನೀಡಿದ್ದಲ್ಲಿ ಹುಲಿ ಸೆರೆ ಹಿಡಿಯಲು ಸಹಕಾರಿಯಾಗುತ್ತದೆ. ಸ್ಥಳೀಯರು ಸಹಕಾರ ನೀಡಬೇಕು’ ಎಂದು ಕೋರಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿ, ‘ಇರ್ಪುವಿನಿಂದ ಕೂಟಿಯಾಲವರೆಗೂ ಹುಲಿಯ ಚಲನವಲನದ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಈ ಸಂಬಂಧ ಕ್ಯಾಂಪ್ಗಳನ್ನು ಮಾಡಿ ಹುಲಿ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಮಾಕುಟ್ಟ-ಶ್ರೀಮಂಗಲ ವನ್ಯಜೀವಿ ವಿಭಾಗ, ತಿತಿಮತಿ ಆರ್ಆರ್ಟಿ ವಿಭಾಗ ಹಾಗೂ ಇಟಿಎಫ್ ವಿಭಾಗ ಸೇರಿದಂತೆ ಒಟ್ಟು 60 ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ವಿವರಿಸಿದರು.</p>.<p>ವಲಯ ಅರಣ್ಯಾಧಿಕಾರಿ ಸಂತೋಷ್ ಹೂಗಾರ್, ಶಂಕರ್, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪ್ರಶಾಂತ್, ನವೀನ್, ಪ್ರೀತಮ್, ಅರಣ್ಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. </p>.<div><blockquote>ಬಿರುನಾಣಿ ಪಂಚಾಯಿತಿ ವ್ಯಾಪ್ತಿಯಲ್ಲಿ ಭಯದ ವಾತಾವರಣದಲ್ಲಿ ವಾಸಿಸುವಂತಾಗಿದೆ. ಹುಲಿ ಹಾಗೂ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.</blockquote><span class="attribution">–ರಾಜೇಶ್ ಬಿರುನಾಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷ</span></div>.<div><blockquote>ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ವನ್ಯಜೀವಿ ಹಾಗೂ ಮಾನವ ಸಂಘರ್ಷ ಇದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಶಾಸಕರು ಪ್ರಯತ್ನಿಸಿದ್ದಾರೆ.</blockquote><span class="attribution">–ಸಂಕೇತ್ ಪೂವಯ್ಯ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>