ಲಕ್ಷ್ಮಣತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಶ್ರೀಮಂಗಲ- ನಾಲ್ಕೇರಿ ಸೇತುವೆ ಜಲಾವೃತಗೊಂಡಿದೆ.
ಹಾರಂಗಿ ಜಲಾಶಯಕ್ಕೆ 13,988 ಕ್ಯುಸೆಕ್ ನಷ್ಟು ನೀರು ಹರಿದು ಬರುತ್ತಿದ್ದು, 13,166 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಭಾಗಮಂಡಲದಲ್ಲಿ ಹೆಚ್ಚು ಮಳೆ ಸುರಿದಿದ್ದರಿಂದ ಭಾಗಮಂಡಲ- ನಾಪೋಕ್ಲು ರಸ್ತೆಯಲ್ಲಿ ಮತ್ತೆ ನೀರು ಹರಿಯುತ್ತಿದೆ.
ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಹಳ್ಳಿಯಲ್ಲಿ 20 ಸೆಂ.ಮೀನಷ್ಟು ಭಾರಿ ಮಳೆ ಸುರಿದಿದೆ. ಭಾಗಮಂಡಲದಲ್ಲಿ 16, ಚೌಡ್ಲು ಗ್ರಾಮದಲ್ಲಿ 12, ಟಿ.ಶೆಟ್ಟಿಗೇರಿಯಲ್ಲಿ 14, ಸೆಂ.ಮೀನಷ್ಟು ಹೆಚ್ಚು ಮಳೆ ಸುರಿದಿದೆ. ಗಾಳಿ ಅತಿ ವೇಗವಾಗಿ ಬೀಸಲಿದೆ ಎಂಬ ಮುನ್ನೆಚ್ಚರಿಕೆಯನ್ನು ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ನೀಡಿದೆ.