<p>ಮಡಿಕೇರಿ: ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆಯುತ್ತಿರುವ 11 ನೇ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಬುಡಕಟ್ಟು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಇಂದಿನ ಜರೂರು ಎಂದು ಪ್ರತಿಪಾದಿಸಿದರು.</p>.<p>ಕೊಡಗು ಜಿಲ್ಲೆಯಲ್ಲಿರುವ ಉಪೇಕ್ಷಿತ ಭಾಷೆಗಳಾದ ಎರವ, ಕುಡಿಯ, ಕುರುಬಗಳಂತಹ ವಿಶಿಷ್ಟ ಭಾಷೆಗಳನ್ನು ಉಳಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾಡಳಿತ ಈ ಕಾರ್ಯದ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಕನ್ನಡ ಶಾಲೆಗಳನ್ನು ಉಳಿಸುವುದು ಹಾಗೂ ಅಭಿವೃದ್ಧಿಪಡಿಸುವುದು ಸರ್ಕಾರವೊಂದರ ಜವಾಬ್ದಾರಿ ಅಲ್ಲ. ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು, ಕನ್ನಡ ಪ್ರೇಮಿಗಳು, ಸರ್ಕಾರೇತರ ಸಂಸ್ಥೆಗಳು ಪ್ರತಿ ಗ್ರಾಮಗಳಲ್ಲಿ ಇರುವ ಕನ್ನಡ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಡಿಜಿಟಲ್ ಮಾಧ್ಯಮದಲ್ಲಿ ಕನ್ನಡ ಪುಸ್ತಕಗಳನ್ನು ಪಸರಿಸುವ ಕುರಿತು ಚಿಂತನೆ ನಡೆಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆಯುತ್ತಿರುವ 11 ನೇ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಬುಡಕಟ್ಟು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಇಂದಿನ ಜರೂರು ಎಂದು ಪ್ರತಿಪಾದಿಸಿದರು.</p>.<p>ಕೊಡಗು ಜಿಲ್ಲೆಯಲ್ಲಿರುವ ಉಪೇಕ್ಷಿತ ಭಾಷೆಗಳಾದ ಎರವ, ಕುಡಿಯ, ಕುರುಬಗಳಂತಹ ವಿಶಿಷ್ಟ ಭಾಷೆಗಳನ್ನು ಉಳಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾಡಳಿತ ಈ ಕಾರ್ಯದ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಕನ್ನಡ ಶಾಲೆಗಳನ್ನು ಉಳಿಸುವುದು ಹಾಗೂ ಅಭಿವೃದ್ಧಿಪಡಿಸುವುದು ಸರ್ಕಾರವೊಂದರ ಜವಾಬ್ದಾರಿ ಅಲ್ಲ. ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು, ಕನ್ನಡ ಪ್ರೇಮಿಗಳು, ಸರ್ಕಾರೇತರ ಸಂಸ್ಥೆಗಳು ಪ್ರತಿ ಗ್ರಾಮಗಳಲ್ಲಿ ಇರುವ ಕನ್ನಡ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಡಿಜಿಟಲ್ ಮಾಧ್ಯಮದಲ್ಲಿ ಕನ್ನಡ ಪುಸ್ತಕಗಳನ್ನು ಪಸರಿಸುವ ಕುರಿತು ಚಿಂತನೆ ನಡೆಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>