ಅವರು ಪ್ರತಿಯೊಂದು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ಭಾಷೆ, ನೆಲ, ಜಲವನ್ನು ಉಳಿಸುವಂತೆ ಎಲ್ಲರಲ್ಲಿಯೂ ತಿಳಿಸುತ್ತಿದ್ದರು. ಅವರ ಸೇವೆಯನ್ನು ಸ್ಮರಿಸಿ ನಾವು ಈ ಶ್ರದ್ಧಾಂಜಲಿ ಅರ್ಪಿಸುವುದು ಕನ್ನಡ ಸಾಹಿತ್ಯ ಅಭಿಮಾನಿಗೆ ಸಲ್ಲಿಸುತ್ತಿರುವ ಗೌರವವಾಗಿದೆ ಎಂದರು.