ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡ್ಡೆಹೊಸೂರು ಅಪಘಾತ : ಅರಣ್ಯ ಇಲಾಖೆ ನೌಕರ ಸೇರಿ ಇಬ್ಬರ ಸಾವು

Last Updated 24 ಜೂನ್ 2022, 2:16 IST
ಅಕ್ಷರ ಗಾತ್ರ

ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಬಳಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರರಾದ ಗೋಣಿಕೊಪ್ಪದ ಕೈಕೇರಿಯ ದೀಕ್ಷಿತ್ (24), ಪೊನ್ನಪ್ಪ ಮೃತಪಟ್ಟಿದ್ದಾರೆ.

ಹಿಂಬದಿ ಸವಾರ ಬಸವನಹಳ್ಳಿ ನಿವಾಸಿ ಪೊನ್ನಪ್ಪ ಗಾಯಗಳಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಇಬ್ಬರೂ ಗುಡ್ಡೇಹೊಸೂರಿನಿಂದ ಕುಶಾಲನಗರದ ಕಡೆಗೆ ಬರುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ದೀಕ್ಷಿತ್ ಅರಣ್ಯ ಇಲಾಖೆಯಲ್ಲಿ ನೌಕರರಾಗಿದ್ದರು. ಅಪಘಾತ ಸಂಭವಿಸಿದ ಕೂಡಲೆ ರಸ್ತೆಯಲ್ಲಿ ನರಳಾತ್ತಿದ್ದಪೊನ್ನಪ್ಪರವರನ್ನು ಕುಶಾಲನಗರ ನಿವಾಸಿ ಜಲೀಲ್, ಕಲೀಲ್, ಅಜೀಜ್, ಜಕ್ರಿಯಾ ಮಡಿಕೇರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಈ ಬಗ್ಗೆ ಕುಶಾಲನಗರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT