ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಂತಿ ಸ್ಪರ್ಶ: ಎರಡು ಕಾಡಾನೆ ಸಾವು

Last Updated 25 ಜುಲೈ 2022, 6:10 IST
ಅಕ್ಷರ ಗಾತ್ರ

ಸಿದ್ದಾಪುರ (ಕೊಡಗು): ಇಲ್ಲಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸೋಮವಾರ ನಸುಕಿನಲ್ಲಿ ಮೃತಪಟ್ಟಿವೆ.

ನೆಲ್ಯಹುದಿಕೇರಿ ಗ್ರಾಮದ ಕೋಣೇರಿರ ಪ್ರಕಾಶ್ ಹಾಗೂ ಸುಮನ್ ಚಂಗಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದುಹೋಗಿವೆ. ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಬಿದ್ದಿದ್ದರಿಂದ ತಂತಿ ಕೆಳಕ್ಕೆ ಬಾಗಿವೆ‌. ತೋಟದಲ್ಲಿ ಕಾಡಾನೆಗಳು ಹಾದು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ. ಇದರಿಂದಾಗಿ ಗಂಡು ಕಾಡಾನೆ ಹಾಗೂ ಒಂದು ಹೆಣ್ಣಾನೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ‌ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT