ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು- ಕೇರಳ ಗಡಿಭಾಗವಾದ ಪೆರುಂಬಾಡಿ ಚೆಕ್ಪೋಸ್ಟ್ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿರುವಾಗ ಕೇರಳದ ಇರಿಟಿಯಿಂದ ಮೈಸೂರಿಗೆ ತೆರಳುತ್ತಿದ್ದ ಕಾರೊಂದರಲ್ಲಿ ನಗದು ಪತ್ತೆಯಾಗಿತ್ತು. ರಂಶೀದ್ ಎಂಬುವವರ ಬಳಿಯಿದ್ದ ದಾಖಲೆಯಿಲ್ಲದ ನಗದನ್ನು ವಶಕ್ಕೆ ಪಡೆದ ಅಧಿಕಾರಿಗಳು ಉಪ ಖಜಾನೆಗೆ ಒಪ್ಪಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.