ಕಾರ್ಯಕ್ರಮದ ಪ್ರಯುಕ್ತ ಬೆಳಿಗ್ಗೆ ಶ್ರೀ ಗಣಪತಿ ಹೋಮ, ವನದುರ್ಗಾದೇವಿಗೆ ಪಂಚಾಮೃತ ಅಭಿಷೇಕ, ಚಂಡಿಕಾ ಹೋಮ ಮತ್ತು ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಪೂಜಾ ಕಾರ್ಯವನ್ನು ದೇವಾಲಯದ ಅರ್ಚಕ ಬಾಲೂ ಭಟ್ ಹಾಗೂ ರಾಘವೇಂದ್ರ ಭಟ್ ಮತ್ತಿತರರು ನಡೆಸಿಕೊಟ್ಟರು.