ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ಮಾತನಾಡಿ, ‘ಜಿಲ್ಲೆಯ ಅನೇಕ ಕಡೆ ಕೇಂದ್ರಗಳು ಸ್ಥಾಪನೆಯಾಗಬೇಕು. ಜನರಿಗೆ ಕೆಲಸದ ನಡುವೆ ಮಕ್ಕಳನ್ನು ನೋಡಿಕೊಂಡು ಕಾರ್ಯ ನಿರ್ವಹಿಸುವುದು ಕಷ್ಟಕರವಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಶು ಪಾಲನಾ ಕೇಂದ್ರ ಸ್ಥಾಪನೆಯಾಗಿದ್ದು ಜನಸಾಮಾನ್ಯರಿಗೆ ಮತ್ತು ಅಧಿಕಾರಿ ವರ್ಗದವರಿಗೂ ಅನುಕೂಲವಾಗಲಿದೆ’ ಎಂದರು.