<p><strong>ಸುಂಟಿಕೊಪ್ಪ:</strong> ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ಮನರೇಗಾ) ಕಾಯ್ದೆಯ ಬದಲಿಗೆ ಹೊಸದಾಗಿ ಜಾರಿಗೆ ತಂದಿರುವ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯನ್ನು ವಿರೋಧಿಸಿ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭಾತ್ಯಾಗ ಮಾಡಿದರು.</p>.<p>ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಪಿಡಿಒ ವಿ.ಜಿ.ಲೋಕೇಶ್ ಅವರು ಕೇಂದ್ರದ ಸುತ್ತೋಲೆಯಲ್ಲಿ ಈ ಕುರಿತು ಪ್ರಸ್ತಾಪಿಸಿದಾಗ ಪಂಚಾಯಿತಿ ಸದಸ್ಯರಾದ ಎಚ್.ಯು.ರಫೀಕ್ಖಾನ್ ಅವರು ವಿರೋಧ ವ್ಯಕ್ತಪಡಿಸಿದರಲ್ಲದೆ, ಸಭಾ ನಡಾವಳಿಯಲ್ಲಿ ವಿರೋಧವನ್ನು ಲಿಖಿತವಾಗಿ ಬರೆಸಿದರು. ಮನರೇಗಾ ಯೋಜನೆಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದರು.</p>.<p>ಸಭಾತ್ಯಾಗ ಮಾಡಿದ ಬಳಿಕ ಹೊರಬಂದು ‘ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಿರುವುದಕ್ಕೆ ಧಿಕ್ಕಾರ ಕೂಗಿದರು.</p>.<p>ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್. ಸಬಾಸ್ಟೀನ್, ಆಲಿಕುಟ್ಟಿ, ಶಬೀರ್, ನಾಗರತ್ನ ಸುರೇಶ್ ಹಾಗೂ ರೇಷ್ಮಾ ಅವರು ಎಚ್.ಯು ರಫೀಕ್ಖಾನ್ಗೆ ಬೆಂಬಲ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ಮನರೇಗಾ) ಕಾಯ್ದೆಯ ಬದಲಿಗೆ ಹೊಸದಾಗಿ ಜಾರಿಗೆ ತಂದಿರುವ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯನ್ನು ವಿರೋಧಿಸಿ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭಾತ್ಯಾಗ ಮಾಡಿದರು.</p>.<p>ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಪಿಡಿಒ ವಿ.ಜಿ.ಲೋಕೇಶ್ ಅವರು ಕೇಂದ್ರದ ಸುತ್ತೋಲೆಯಲ್ಲಿ ಈ ಕುರಿತು ಪ್ರಸ್ತಾಪಿಸಿದಾಗ ಪಂಚಾಯಿತಿ ಸದಸ್ಯರಾದ ಎಚ್.ಯು.ರಫೀಕ್ಖಾನ್ ಅವರು ವಿರೋಧ ವ್ಯಕ್ತಪಡಿಸಿದರಲ್ಲದೆ, ಸಭಾ ನಡಾವಳಿಯಲ್ಲಿ ವಿರೋಧವನ್ನು ಲಿಖಿತವಾಗಿ ಬರೆಸಿದರು. ಮನರೇಗಾ ಯೋಜನೆಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದರು.</p>.<p>ಸಭಾತ್ಯಾಗ ಮಾಡಿದ ಬಳಿಕ ಹೊರಬಂದು ‘ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಿರುವುದಕ್ಕೆ ಧಿಕ್ಕಾರ ಕೂಗಿದರು.</p>.<p>ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್. ಸಬಾಸ್ಟೀನ್, ಆಲಿಕುಟ್ಟಿ, ಶಬೀರ್, ನಾಗರತ್ನ ಸುರೇಶ್ ಹಾಗೂ ರೇಷ್ಮಾ ಅವರು ಎಚ್.ಯು ರಫೀಕ್ಖಾನ್ಗೆ ಬೆಂಬಲ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>