ದೇವಸ್ಥಾನಗಳಲ್ಲಿ ಬೆಳಗಿನ ಜಾವ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಮುಂತಾದ ಪೂಜಾ ಕೈಂಕರ್ಯಗಳು ನಡೆದವು. ಈ ವೇಳೆ ಕಲ್ಲಳ್ಳಿ ಮಠದ ರುದ್ರಮುನಿ ಸ್ವಾಮೀಜಿ, ದೊಡ್ಡಬಳ್ಳಾಪುರ ಮಠದ ನಿಶ್ಚಲದೇಶೀಕೇಂದ್ರ ಸ್ವಾಮೀಜಿ, ನೀರುಗುಂದ ಗ್ರಾಮದ ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ, ಕಾರ್ಯದರ್ಶಿ ನಾಗೇಶ್, ಸಮಿತಿ ಸದಸ್ಯರು, ಬೆಂಗಳೂರು ಸಿದ್ದಗಂಗಾ ಶಾಖಾ ಮಠದ ಮಹಿಳಾ ಸಂಘಟನಾ ವೇದಿಕೆ ಅಧ್ಯಕ್ಷೆ ಉಷಾ ಯೋಗಾನಂದ್, ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆ ರಾಷ್ಟ್ರೀಯ ಸಂಚಾಲಕ ಎಸ್.ಮಹೇಶ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ದಿವಾಕರ್, ಕಾರ್ಯದರ್ಶಿ ದಯಾನಂದ್, ವೇದಿಕೆ ಸದಸ್ಯರು, ವಿವಿಧ ಸ್ವಾಮೀಜಿಗಳು, ಭಕ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.