ಕಾಫಿ ತೋಟಗಳಲ್ಲಿ ಕಾಫಿ, ಕರಿಮೆಣಸು ಕೊಯ್ಲು ನಡೆಯುತ್ತಿದ್ದು ’ಲಾಕ್ಡೌನ್’ ಆದೇಶದ ಬಗ್ಗೆ ಅರಿವಿದ್ದರೂ ನಿರ್ಲಕ್ಷ್ಯ ತೋರಿದ ವಾಹನ ಚಾಲಕರು ಎಂದಿನಂತೆ ಸುಂಟಿಕೊಪ್ಪ, ನಾಕೂರು, ಕಂಬಿಬಾಣೆ, ಕೊಡಗರಹಳ್ಳಿ, ಬಸವನಹಳ್ಳಿ, ಗುಡ್ಡೆಹೊಸೂರು, ಕೊಪ್ಪ, ರಾಣಿಗೇಟ್ ವಿವಿಧೆಡೆಗಳಿಂದ ಜೀಪ್ ಸೇರಿದಂತೆ ಇನ್ನಿತರ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದರು. ಇದನ್ನು ಗಮನಿಸಿದ ಪಿಎಸ್ಐ ತಿಮ್ಮಪ್ಪ ಮತ್ತು ಗ್ರಾಮ ಪಂಚಾಯಿತಿ ಪಿಡಿಒ ವೇಣುಗೋಪಾಲ್ ಸಿಕ್ಕಿದ 3 ವಾಹನಗಳನ್ನು ತಡೆದು ತಮ್ಮ ವಶಕ್ಕೆ ತೆಗೆದುಕೊಂಡರು.