ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ ಪ.ಪಂ. ಉಪಾಧ್ಯಕ್ಷ ಹರ್ಷವರ್ಧನ್‌ ನಿಧನ

Last Updated 19 ಏಪ್ರಿಲ್ 2021, 12:38 IST
ಅಕ್ಷರ ಗಾತ್ರ

ವಿರಾಜಪೇಟೆ: ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷ ಕೆ.ಬಿ. ಹರ್ಷವರ್ಧನ್ (45) ತೀವ್ರ ಹೃದಯಾಘಾತದಿಂದ ಭಾನುವಾರ ಮಧ್ಯರಾತ್ರಿ ನಿಧನರಾದರು.

ಪಟ್ಟಣದ ಮೀನುಪೇಟೆಯ ಮನೆಯಲ್ಲಿ ವಾಸವಿದ್ದ ಕೆ.ಬಿ. ಹರ್ಷವರ್ಧನ್ ಅವರಿಗೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಮೀನುಪೇಟೆಯಲ್ಲಿರುವ ತೋಟದಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.

13ನೇ ವಾರ್ಡ್‌ನಲ್ಲಿ ಬಿಜೆಪಿಯಿಂದ ಕೆ.ಬಿ. ಹರ್ಷವರ್ಧನ್ ಆಯ್ಕೆಯಾಗಿದ್ದರು. ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸಂತಾಪ ಸೂಚಿಸಲಾಯಿತು.

ಶಾಸಕ ಕೆ.ಜಿ ಬೋಪಯ್ಯ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಬಿನ್ ದೇವಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮೀತಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀತಾ, ಮುಖ್ಯಾಧಿಕಾರಿ ಎ.ಎಂ ಶ್ರೀಧರ್, ಎಂಜಿನಿಯರ್ ಹೇಮಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರು ಅಂತಿಮ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT