ಹುತಾತ್ಮರ ದಿನದ ಪ್ರಯುಕ್ತ ಮಡಿಕೇರಿಯಲ್ಲಿ ಗಾಂಧೀಜಿಯವರ ಚಿತಾಭಸ್ಮದ ಮೆರವಣಿಗೆ ನಡೆಸಲಾಯಿತು. ಗಾಂಧಿ ಮಂಟಪದಲ್ಲಿ ಚಿತಾಭಸ್ಮವಿರಿಸಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು. ಗಣ್ಯರು ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಜೊತೆಗೆ ಪೊಲೀಸ್ ಬ್ಯಾಂಡ್ನೊಂದಿಗೆ ಪೊಲೀಸ್ ತಂಡದಿಂದ ಗೌರವ ವಂದನೆ ಸಲ್ಲಿಸಲಾಯಿತು.