<p><strong>ಮಡಿಕೇರಿ: </strong>ಕಿತ್ತೂರು ಸ್ವಾತಂತ್ರ್ಯ ಸಂಗ್ರಾಮ ಕುರಿತು ನಡೆಯಲಿರುವ ‘ಕಿತ್ತೂರು ಉತ್ಸವ’ದ ಪ್ರಯುಕ್ತ ನಗರಕ್ಕೆ ಬಂದ ‘ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರಾ’ ವಾಹನವನ್ನು ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಬುಧವಾರ ಸ್ವಾಗತಿಸಿದರು.</p>.<p>ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬರಮಾಡಿಕೊಂಡ ಅವರು ಶುಭ ಕೋರಿದರು. ಈ ವೇಳೆ ತಹಶೀಲ್ದಾರ್ ಮಹೇಶ್, ಪೌರಾಯುಕ್ತ ವಿಜಯ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ,ಯಾತ್ರಾ ನೋಡಲ್ ಅಧಿಕಾರಿ ವೆಂಕಟೇಶ ನಾಗನೂರ ಇದ್ದರು.</p>.<p><strong>ಏನಿದು ವಿಜಯ ಜ್ಯೋತಿ ಯಾತ್ರೆ?</strong></p>.<p>ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ಮರಣಾರ್ಥ ಇದೇ ಅ. 23ರಿಂದ 3 ದಿನ ಬೆಳಗಾವಿ ಜಿಲ್ಲೆಯಲ್ಲಿ ಕಿತ್ತೂರು ಉತ್ಸವ ಜರುಗಲಿದೆ. ಆ ನಿಟ್ಟಿನಲ್ಲಿ ಕಿತ್ತೂರು ಚೆನ್ನಮ್ಮ ಅವರ ‘ವಿಜಯ ಜ್ಯೋತಿ ಯಾತ್ರಾ’ ವಾಹನವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಕಿತ್ತೂರು ಚೆನ್ನಮ್ಮ ಅವರ ಕೊಡಗೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕಿತ್ತೂರು ಸ್ವಾತಂತ್ರ್ಯ ಸಂಗ್ರಾಮ ಕುರಿತು ನಡೆಯಲಿರುವ ‘ಕಿತ್ತೂರು ಉತ್ಸವ’ದ ಪ್ರಯುಕ್ತ ನಗರಕ್ಕೆ ಬಂದ ‘ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರಾ’ ವಾಹನವನ್ನು ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಬುಧವಾರ ಸ್ವಾಗತಿಸಿದರು.</p>.<p>ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬರಮಾಡಿಕೊಂಡ ಅವರು ಶುಭ ಕೋರಿದರು. ಈ ವೇಳೆ ತಹಶೀಲ್ದಾರ್ ಮಹೇಶ್, ಪೌರಾಯುಕ್ತ ವಿಜಯ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ,ಯಾತ್ರಾ ನೋಡಲ್ ಅಧಿಕಾರಿ ವೆಂಕಟೇಶ ನಾಗನೂರ ಇದ್ದರು.</p>.<p><strong>ಏನಿದು ವಿಜಯ ಜ್ಯೋತಿ ಯಾತ್ರೆ?</strong></p>.<p>ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ಮರಣಾರ್ಥ ಇದೇ ಅ. 23ರಿಂದ 3 ದಿನ ಬೆಳಗಾವಿ ಜಿಲ್ಲೆಯಲ್ಲಿ ಕಿತ್ತೂರು ಉತ್ಸವ ಜರುಗಲಿದೆ. ಆ ನಿಟ್ಟಿನಲ್ಲಿ ಕಿತ್ತೂರು ಚೆನ್ನಮ್ಮ ಅವರ ‘ವಿಜಯ ಜ್ಯೋತಿ ಯಾತ್ರಾ’ ವಾಹನವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಕಿತ್ತೂರು ಚೆನ್ನಮ್ಮ ಅವರ ಕೊಡಗೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>