ರಥೋತ್ಸವದಲ್ಲಿ ಕೂಡಿಗೆ, ಕೂಡುಮಂಗಳೂರು, ಕೂಡ್ಲೂರು, ಸುಂದರನಗರ, ಬಸವತ್ತೂರು, ವಿಜಯನಗರ , ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಸಾವಿರಾರು ಭಕ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ ದೊಡ್ಡಮ್ಮ ತಾಯಿ ದೇವಾಲಯ ಸಮಿತಿಯ ಅಧ್ಯಕ್ಷ ಪವನ್ ಕುಮಾರ್, ಉಪಾಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಹರೀಶ್, ಸುರೇಶ್ ಸೇರಿದಂತೆ ಸಮಿತಿ ನಿರ್ದೇಶಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು.