<p><strong>ನಾಪೋಕ್ಲು:</strong> ಸಮೀಪದ ಕೊಳಕೇರಿ, ಕುಂಜಿಲ, ಕೈಕಾಡು ಮುಂತಾದ ಗ್ರಾಮಗಳಲ್ಲಿ ಕಾಡಾನೆಗಳು ನುಗ್ಗಿ ಬೆಳೆಗಳನ್ನು ಧ್ವಂಸ ಮಾಡಿವೆ.</p>.<p>ಒಂದೆಡೆ ಸುರಿಯುತ್ತಿರುವ ಮಳೆ, ಮತ್ತೊಂದೆಡೆ ತೋಟಗಳಲ್ಲಿ ಗಿಡಗಳನ್ನು ಮುರಿದು ಧ್ವಂಸಗೊಳಿಸುತ್ತಿರುವ ಕಾಡಾನೆಗಳ ಹಾವಳಿಯಿಂದ ರೈತರು ಸಂಕಷ್ಟ ಅನುಭವಿಸಬೇಕಿದೆ.</p>.<p>ತೋಟಗಳಿಗೆ ಕಾಡಾನೆಗಳು ನುಗ್ಗದಂತೆ ಗ್ರಾಮಸ್ಥರಯ ಪಟಾಕಿ ಸಿಡಿಸಿದರು. ಎರಡು ದಿನಗಳಿಂದ ಸಂಕಷ್ಟ ಅನುಭವಿಸಿದರು. ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳನ್ನು ಕಾಡಿಗಟ್ಟಲು ಹರಸಾಹಸಪಟ್ಟರು. ಸುರಿಯುವ ಮಳೆ ಕಾರ್ಯಾಚರಣೆಗೆ ಅಡ್ಡಿಯಾಯಿತು.</p>.<p>ಕೊಳಕೇರಿ ಗ್ರಾಮದ ಬೊಮ್ಮಂಜಕೇರಿ ತೋಟಗಳಲ್ಲಿ ಕಾಡಾನೆಗಳು ಸೋಮವಾರ ರಾತ್ರಿ ದಾಂಧಲೆ ನಡೆಸಿ ತೆಂಗು, ಅಡಿಕೆ, ಕಾಫಿ ಗಿಡಗಳನ್ನು ನಾಶಪಡಿಸಿದ್ದು, ರೈತರು ಅಪಾರ ಸಂಕಷ್ಟಕ್ಕೆ ಒಳಗಾಗಿದ್ದಾರೆ.</p>.<p>ಒಂದು ಮರಿಯಾನೆ ಸೇರಿದಂತೆ ಒಂಬತ್ತು ಕಾಡಾನೆಗಳು ಸುತ್ತಮುತ್ತಲು ಅಡ್ಡಾಡುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಸಂರಕ್ಷಣಾಧಿಕಾರಿ ಕಾಳೇಗೌಡ, ಅರಣ್ಯ ರಕ್ಷಕ ಸಿಬ್ಬಂದಿ, ಸ್ಥಳಕ್ಕೆ ಆಗಮಿಸಿ ಕಾಡಾನೆಗಳನ್ನು ಕಾಡಿಗಟ್ಟಲು ಪ್ರಯತ್ನಿಸಿದರೂ ಸಫಲರಾಗಿಲ್ಲ.</p>.<p>ಗ್ರಾಮದ ಅಚ್ಚಾಂಡಿರ, ಪುಲ್ಲೇರ, ಬಿದ್ದಾಟಂಡ, ಅಚ್ಚಪಂಡ, ಮಲೆಯಂಡ ಕುಟುಂಬಸ್ಥರ ತೋಟಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಅಪಾರ ಪ್ರಮಾಣದಲ್ಲಿ ಕಾಫಿ, ಬಾಳೆ, ಅಡಿಕೆ ಗಿಡಗಳನ್ನು ಧ್ವಂಸಮಾಡಿವೆ.</p>.<p>‘ಈಚೆಗೆ ಪೇರೂರು, ಪಂದೇಟು, ಪುಲಿಕೋಟು, ನೆಲಜಿ ಗ್ರಾಮಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದವು. ಇದೀಗ ಕುಂಜಿಲ, ಕೊಳಕೇರಿ ಗ್ರಾಮಗಳಲ್ಲಿ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಆನೆ-ಮಾನವ ಸಂಘರ್ಷ ಈ ಭಾಗದಲ್ಲಿ ನಿರಂತರವಾಗಿದ್ದು, ಭತ್ತದ ಬೇಸಾಯ ಮಾಡಲೂ ಹಿಂದೇಟು ಹಾಕುವಂತಾಗಿದೆ’ ಎಂದು ಬೊಮ್ಮಂಜಕೇರಿಯ ಬೆಳೆಗಾರ ಅಶೋಕ್ ಹೇಳಿದರು.</p>.<p>ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಡಿಆರ್ಎಫ್ಒಗಳಾದ ಫಿರೋಜ್ ಖಾನ್, ದಿಲೀಪ್ ಬೀಟ್ ಫಾರೆಸ್ಟ್ ಶರತ್ ಸೇರಿದಂತೆ 15 ಸಿಬ್ಬಂದಿ ಭಾಗವಹಿಸಿದ್ದರು.</p>.<p><strong>ಕಾಡಾನೆಗಳ ಸ್ಥಳಾಂತರಕ್ಕೆ ಆಗ್ರಹ</strong></p><p> ಕುಂಜಿಲ ಗ್ರಾಮದ ಸುಬ್ರಾಯ ಭಟ್ ಹಾಗೂ ಬೊಮ್ಮಂಜಕೇರಿಯ ಅಶೋಕ್ ಮಾತನಾಡಿ ‘ಕಾಡಾನೆಗಳ ದಾಂಧಲೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆಗಳು ಹಾನಿಗೊಳಗಾಗಿವೆ. ಕಾಡಾನೆಗಳನ್ನು ಒಂದು ಭಾಗದಿಂದ ಓಡಿಸಿದರೆ ಮತ್ತೊಂದು ಭಾಗದಿಂದ ನುಸುಳುತ್ತವೆ. ಆ ಭಾಗದ ಗ್ರಾಮದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಸೆರೆ ಹಿಡಿಯುವ ಮೂಲಕ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಸಮೀಪದ ಕೊಳಕೇರಿ, ಕುಂಜಿಲ, ಕೈಕಾಡು ಮುಂತಾದ ಗ್ರಾಮಗಳಲ್ಲಿ ಕಾಡಾನೆಗಳು ನುಗ್ಗಿ ಬೆಳೆಗಳನ್ನು ಧ್ವಂಸ ಮಾಡಿವೆ.</p>.<p>ಒಂದೆಡೆ ಸುರಿಯುತ್ತಿರುವ ಮಳೆ, ಮತ್ತೊಂದೆಡೆ ತೋಟಗಳಲ್ಲಿ ಗಿಡಗಳನ್ನು ಮುರಿದು ಧ್ವಂಸಗೊಳಿಸುತ್ತಿರುವ ಕಾಡಾನೆಗಳ ಹಾವಳಿಯಿಂದ ರೈತರು ಸಂಕಷ್ಟ ಅನುಭವಿಸಬೇಕಿದೆ.</p>.<p>ತೋಟಗಳಿಗೆ ಕಾಡಾನೆಗಳು ನುಗ್ಗದಂತೆ ಗ್ರಾಮಸ್ಥರಯ ಪಟಾಕಿ ಸಿಡಿಸಿದರು. ಎರಡು ದಿನಗಳಿಂದ ಸಂಕಷ್ಟ ಅನುಭವಿಸಿದರು. ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳನ್ನು ಕಾಡಿಗಟ್ಟಲು ಹರಸಾಹಸಪಟ್ಟರು. ಸುರಿಯುವ ಮಳೆ ಕಾರ್ಯಾಚರಣೆಗೆ ಅಡ್ಡಿಯಾಯಿತು.</p>.<p>ಕೊಳಕೇರಿ ಗ್ರಾಮದ ಬೊಮ್ಮಂಜಕೇರಿ ತೋಟಗಳಲ್ಲಿ ಕಾಡಾನೆಗಳು ಸೋಮವಾರ ರಾತ್ರಿ ದಾಂಧಲೆ ನಡೆಸಿ ತೆಂಗು, ಅಡಿಕೆ, ಕಾಫಿ ಗಿಡಗಳನ್ನು ನಾಶಪಡಿಸಿದ್ದು, ರೈತರು ಅಪಾರ ಸಂಕಷ್ಟಕ್ಕೆ ಒಳಗಾಗಿದ್ದಾರೆ.</p>.<p>ಒಂದು ಮರಿಯಾನೆ ಸೇರಿದಂತೆ ಒಂಬತ್ತು ಕಾಡಾನೆಗಳು ಸುತ್ತಮುತ್ತಲು ಅಡ್ಡಾಡುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಸಂರಕ್ಷಣಾಧಿಕಾರಿ ಕಾಳೇಗೌಡ, ಅರಣ್ಯ ರಕ್ಷಕ ಸಿಬ್ಬಂದಿ, ಸ್ಥಳಕ್ಕೆ ಆಗಮಿಸಿ ಕಾಡಾನೆಗಳನ್ನು ಕಾಡಿಗಟ್ಟಲು ಪ್ರಯತ್ನಿಸಿದರೂ ಸಫಲರಾಗಿಲ್ಲ.</p>.<p>ಗ್ರಾಮದ ಅಚ್ಚಾಂಡಿರ, ಪುಲ್ಲೇರ, ಬಿದ್ದಾಟಂಡ, ಅಚ್ಚಪಂಡ, ಮಲೆಯಂಡ ಕುಟುಂಬಸ್ಥರ ತೋಟಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಅಪಾರ ಪ್ರಮಾಣದಲ್ಲಿ ಕಾಫಿ, ಬಾಳೆ, ಅಡಿಕೆ ಗಿಡಗಳನ್ನು ಧ್ವಂಸಮಾಡಿವೆ.</p>.<p>‘ಈಚೆಗೆ ಪೇರೂರು, ಪಂದೇಟು, ಪುಲಿಕೋಟು, ನೆಲಜಿ ಗ್ರಾಮಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದವು. ಇದೀಗ ಕುಂಜಿಲ, ಕೊಳಕೇರಿ ಗ್ರಾಮಗಳಲ್ಲಿ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಆನೆ-ಮಾನವ ಸಂಘರ್ಷ ಈ ಭಾಗದಲ್ಲಿ ನಿರಂತರವಾಗಿದ್ದು, ಭತ್ತದ ಬೇಸಾಯ ಮಾಡಲೂ ಹಿಂದೇಟು ಹಾಕುವಂತಾಗಿದೆ’ ಎಂದು ಬೊಮ್ಮಂಜಕೇರಿಯ ಬೆಳೆಗಾರ ಅಶೋಕ್ ಹೇಳಿದರು.</p>.<p>ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಡಿಆರ್ಎಫ್ಒಗಳಾದ ಫಿರೋಜ್ ಖಾನ್, ದಿಲೀಪ್ ಬೀಟ್ ಫಾರೆಸ್ಟ್ ಶರತ್ ಸೇರಿದಂತೆ 15 ಸಿಬ್ಬಂದಿ ಭಾಗವಹಿಸಿದ್ದರು.</p>.<p><strong>ಕಾಡಾನೆಗಳ ಸ್ಥಳಾಂತರಕ್ಕೆ ಆಗ್ರಹ</strong></p><p> ಕುಂಜಿಲ ಗ್ರಾಮದ ಸುಬ್ರಾಯ ಭಟ್ ಹಾಗೂ ಬೊಮ್ಮಂಜಕೇರಿಯ ಅಶೋಕ್ ಮಾತನಾಡಿ ‘ಕಾಡಾನೆಗಳ ದಾಂಧಲೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆಗಳು ಹಾನಿಗೊಳಗಾಗಿವೆ. ಕಾಡಾನೆಗಳನ್ನು ಒಂದು ಭಾಗದಿಂದ ಓಡಿಸಿದರೆ ಮತ್ತೊಂದು ಭಾಗದಿಂದ ನುಸುಳುತ್ತವೆ. ಆ ಭಾಗದ ಗ್ರಾಮದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಸೆರೆ ಹಿಡಿಯುವ ಮೂಲಕ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>