<p><strong>ನಾಪೋಕ್ಲು:</strong> ದೊಡ್ಡಪುಲಿಕೋಟು ಗ್ರಾಮ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಡಿಕೇರಿಗೆ ತೆರಳಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ರೆಸಾರ್ಟ್ಗೆ ಅನುಮತಿ ನೀಡಬಾರದು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.</p>.<p>ರೆಸಾರ್ಟಿನ ವಿಚಾರವಾಗಿ ಗ್ರಾಮಸ್ಥರು ಮಡಿಕೇರಿಗೆ ತೆರಳಿ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಇದುವರೆಗೂ ಸಲ್ಲಿಸಿದ ಅರ್ಜಿಯ ಸ್ಥಿತಿಗತಿಯ ವಿವರವನ್ನು ಪಡೆದರು ಹಾಗೂ ಗ್ರಾಮದಲ್ಲಿ ರೆಸಾರ್ಟ್ಗೆ ಯಾವುದೇ ರೀತಿಯ ಅನುಮತಿಯನ್ನು ನೀಡಬಾರದು ಎಂದು ಮನವಿಯನ್ನು ಮಾಡಿದರು.</p>.<p>ಸಮಿತಿಯ ಸಂಚಾಲಕ ಕರವಂಡ ಲವ ನಾಣಯ್ಯ ಮಾತನಾಡಿ, ‘ರೆಸಾರ್ಟ್ ನಿರ್ಮಾಣದಿಂದ ಗ್ರಾಮದಲ್ಲಿ ಸಮಸ್ಯೆಗಳು ಉದ್ಭವಿಸುತ್ತವೆ. ಸ್ವಚ್ಛ ಪರಿಸರಕ್ಕೆ ಧಕ್ಕೆಯಾಗುತ್ತದೆ. ಈ ರೀತಿಯ ಸಮಸ್ಯೆಗಳು ಆಗದಂತೆ ಗ್ರಾಮ ಸಭೆಯಲ್ಲಿ ಪಂಚಾಯಿತಿಯ ಮೂಲಕ ಗ್ರಾಮಸ್ಥರೆಲ್ಲರೂ ಸೇರಿ ರೆಸಾರ್ಟ್ ನಿರ್ಮಾಣಕ್ಕೆ ತಡೆಯೊಡ್ಡಲು ನಿರ್ಣಯ ಕೈಗೊಳ್ಳಲಾಗಿದೆ. ನಿರ್ಣಯ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ತಹಶೀಲ್ದಾರ್ ಕಚೇರಿ, ಮಡಿಕೇರಿ ಗ್ರಾಮಾಂತರ ಅಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಲಾಗಿದೆ’ ಎಂದರು.</p>.<p>ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ಸದಸ್ಯರಾದ ಮುಕ್ಕಾಟಿರ ಸುತನ್ ಸುಬ್ಬಯ್ಯ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ದೊಡ್ಡಪುಲಿಕೋಟು ಗ್ರಾಮ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಡಿಕೇರಿಗೆ ತೆರಳಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ರೆಸಾರ್ಟ್ಗೆ ಅನುಮತಿ ನೀಡಬಾರದು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.</p>.<p>ರೆಸಾರ್ಟಿನ ವಿಚಾರವಾಗಿ ಗ್ರಾಮಸ್ಥರು ಮಡಿಕೇರಿಗೆ ತೆರಳಿ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಇದುವರೆಗೂ ಸಲ್ಲಿಸಿದ ಅರ್ಜಿಯ ಸ್ಥಿತಿಗತಿಯ ವಿವರವನ್ನು ಪಡೆದರು ಹಾಗೂ ಗ್ರಾಮದಲ್ಲಿ ರೆಸಾರ್ಟ್ಗೆ ಯಾವುದೇ ರೀತಿಯ ಅನುಮತಿಯನ್ನು ನೀಡಬಾರದು ಎಂದು ಮನವಿಯನ್ನು ಮಾಡಿದರು.</p>.<p>ಸಮಿತಿಯ ಸಂಚಾಲಕ ಕರವಂಡ ಲವ ನಾಣಯ್ಯ ಮಾತನಾಡಿ, ‘ರೆಸಾರ್ಟ್ ನಿರ್ಮಾಣದಿಂದ ಗ್ರಾಮದಲ್ಲಿ ಸಮಸ್ಯೆಗಳು ಉದ್ಭವಿಸುತ್ತವೆ. ಸ್ವಚ್ಛ ಪರಿಸರಕ್ಕೆ ಧಕ್ಕೆಯಾಗುತ್ತದೆ. ಈ ರೀತಿಯ ಸಮಸ್ಯೆಗಳು ಆಗದಂತೆ ಗ್ರಾಮ ಸಭೆಯಲ್ಲಿ ಪಂಚಾಯಿತಿಯ ಮೂಲಕ ಗ್ರಾಮಸ್ಥರೆಲ್ಲರೂ ಸೇರಿ ರೆಸಾರ್ಟ್ ನಿರ್ಮಾಣಕ್ಕೆ ತಡೆಯೊಡ್ಡಲು ನಿರ್ಣಯ ಕೈಗೊಳ್ಳಲಾಗಿದೆ. ನಿರ್ಣಯ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ತಹಶೀಲ್ದಾರ್ ಕಚೇರಿ, ಮಡಿಕೇರಿ ಗ್ರಾಮಾಂತರ ಅಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಲಾಗಿದೆ’ ಎಂದರು.</p>.<p>ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ಸದಸ್ಯರಾದ ಮುಕ್ಕಾಟಿರ ಸುತನ್ ಸುಬ್ಬಯ್ಯ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>