<p><strong>ವಿರಾಜಪೇಟೆ:‘</strong>ಸಮುದಾಯದವರ ಒಂದೆಡೆ ಸೇರಲು ಕ್ರೀಡಾಕೂಟಗಳು ಪ್ರೇರಣೆಯಾಗಿವೆ’ ಎಂದು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಅಭಿಪ್ರಾಯಪಟ್ಟರು.<br><br> ಪಟ್ಟಣದ ಕಾವೇರಿ ಕೊಡವ ಕೇರಿ ಆಶ್ರಯದಲ್ಲಿ ಚಿಕ್ಕಪೇಟೆ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ 4ನೇ ವರ್ಷದ ಅಂತರ ಕೊಡವ ಕೇರಿ ಬ್ಯಾಡ್ಮಿಂಟನ್ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕ್ರೀಡಾಪಟುಗಳು ಕೂಡ ಕ್ರೀಡಾಸ್ಫೂರ್ತಿಯಿಂದ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಪಟ್ಟಡ ಪೂವಣ್ಣ ಮಾತನಾಡಿ ಸಂಘಟನಾತ್ಮಕವಾಗಿ ಚಿಂತಿಸಿದಲ್ಲಿ ಹೊಸ ಅವಿಷ್ಕಾರಗಳು ಮೂಡಿಬರುತ್ತವೆ ಎಂದರು. ಕೊಡವ ಕೇರಿಗಳ ಒಕ್ಕೂಟದ ಅಧ್ಯಕ್ಷ ಮೇಕೆರಿರ ರವಿ ಪೆಮ್ಮಯ್ಯ ಮಾತನಾಡಿ, ಕೊಡವ ಕೇರಿಗಳ ಮಧ್ಯೆ ಸಾಮರಸ್ಯ ಬೆಸೆಯಲು ಇನ್ನಷ್ಟು ಪಂದ್ಯಾಟಗಳು ನಡೆಯಬೇಕು ಎಂದರು.</p>.<p> ಕೇರಿಯ ಅಧ್ಯಕ್ಷ ಮೇರಿಯಂಡ ಅರಸು ಅಚ್ಚಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇರಿಗಳ ನಡುವೆ ಸಾಮರಸ್ಯ , ಭ್ರಾತೃತ್ವ ಬಲಗೊಳಿಸಲು ಪಂದ್ಯಾಟಗಳನ್ನು ಆಯೋಜಿಸಲಾಗುತ್ತಿದೆ ಎಂದರು.<br /> ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಟ್ಟೆಚೆರುವಂಡ ನಾಚಪ್ಪ ಅವರನ್ನು ಸನ್ಮಾನಿಸಲಾಯಿತು. ಟೂರ್ನಿಯ ತಾಂತ್ರಿಕ ಸಲಹೆಗಾರ ನೆರವಂಡ ಸುರೇಶ್ ಮತ್ತು ಕೇರಿಯ ಉಪಾಧ್ಯಕ್ಷ ಅಂಜಪರವಂಡ ಅನಿಲ್ ಮಂದಣ್ಣ, ಬೊಪ್ಪಂಡ ತ್ರಿಶೂಲ್ ಗಣಪತಿ, ಚೊಟ್ಟೇರ ರವಿ, ಕೇರಿಯ ಪದಾಧಿಕಾರಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:‘</strong>ಸಮುದಾಯದವರ ಒಂದೆಡೆ ಸೇರಲು ಕ್ರೀಡಾಕೂಟಗಳು ಪ್ರೇರಣೆಯಾಗಿವೆ’ ಎಂದು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಅಭಿಪ್ರಾಯಪಟ್ಟರು.<br><br> ಪಟ್ಟಣದ ಕಾವೇರಿ ಕೊಡವ ಕೇರಿ ಆಶ್ರಯದಲ್ಲಿ ಚಿಕ್ಕಪೇಟೆ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ 4ನೇ ವರ್ಷದ ಅಂತರ ಕೊಡವ ಕೇರಿ ಬ್ಯಾಡ್ಮಿಂಟನ್ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕ್ರೀಡಾಪಟುಗಳು ಕೂಡ ಕ್ರೀಡಾಸ್ಫೂರ್ತಿಯಿಂದ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಪಟ್ಟಡ ಪೂವಣ್ಣ ಮಾತನಾಡಿ ಸಂಘಟನಾತ್ಮಕವಾಗಿ ಚಿಂತಿಸಿದಲ್ಲಿ ಹೊಸ ಅವಿಷ್ಕಾರಗಳು ಮೂಡಿಬರುತ್ತವೆ ಎಂದರು. ಕೊಡವ ಕೇರಿಗಳ ಒಕ್ಕೂಟದ ಅಧ್ಯಕ್ಷ ಮೇಕೆರಿರ ರವಿ ಪೆಮ್ಮಯ್ಯ ಮಾತನಾಡಿ, ಕೊಡವ ಕೇರಿಗಳ ಮಧ್ಯೆ ಸಾಮರಸ್ಯ ಬೆಸೆಯಲು ಇನ್ನಷ್ಟು ಪಂದ್ಯಾಟಗಳು ನಡೆಯಬೇಕು ಎಂದರು.</p>.<p> ಕೇರಿಯ ಅಧ್ಯಕ್ಷ ಮೇರಿಯಂಡ ಅರಸು ಅಚ್ಚಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇರಿಗಳ ನಡುವೆ ಸಾಮರಸ್ಯ , ಭ್ರಾತೃತ್ವ ಬಲಗೊಳಿಸಲು ಪಂದ್ಯಾಟಗಳನ್ನು ಆಯೋಜಿಸಲಾಗುತ್ತಿದೆ ಎಂದರು.<br /> ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಟ್ಟೆಚೆರುವಂಡ ನಾಚಪ್ಪ ಅವರನ್ನು ಸನ್ಮಾನಿಸಲಾಯಿತು. ಟೂರ್ನಿಯ ತಾಂತ್ರಿಕ ಸಲಹೆಗಾರ ನೆರವಂಡ ಸುರೇಶ್ ಮತ್ತು ಕೇರಿಯ ಉಪಾಧ್ಯಕ್ಷ ಅಂಜಪರವಂಡ ಅನಿಲ್ ಮಂದಣ್ಣ, ಬೊಪ್ಪಂಡ ತ್ರಿಶೂಲ್ ಗಣಪತಿ, ಚೊಟ್ಟೇರ ರವಿ, ಕೇರಿಯ ಪದಾಧಿಕಾರಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>