<p><strong>ವಿರಾಜಪೇಟೆ:</strong> ಅನುದಾನಿತ ಕಾಲೇಜುಗಳ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಸೋಮವಾರ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಖಜಾಂಚಿ ಎ.ಎನ್.ಹೇಮಂತ್ ಕುಮಾರ್, ‘ಕಾರ್ಯಭಾರದ ಕೊರತೆಯಿರುವ ಅನುದಾನಿತ ಕಾಲೇಜುಗಳ ಉಪನ್ಯಾಸಕರನ್ನು ಕಾರ್ಯಭಾರ ಹೊಂದಿರುವ ಕಾಲೇಜುಗಳಿಗೆ ನಿಯೋಜಿಸಲಾಗುತ್ತಿದೆ. ಇದರಿಂದ ಕೆಲ ಉಪನ್ಯಾಸಕರು ವಾರದ 3 ದಿನಗಳು ಸಾಕಷ್ಟು ದೂರದ ಊರುಗಳಲ್ಲಿನ ಅನುದಾನಿತ ಕಾಲೇಜಿಗೆ ತೆರಳಿ ಕಾರ್ಯನಿರ್ವಹಿಸುವಂತಾಗಿದೆ. ಕೆಲ ಉಪನ್ಯಾಸಕರಿಗೆ ನಿಯೋಜನೆ ಸ್ಥಳಾವಕಾಶವು ಇಲ್ಲವಾಗಿದೆ. ಆದ್ದರಿಂದ ನಿಗದಿತ ಕಾರ್ಯಭಾರವಿಲ್ಲದ ಉಪನ್ಯಾಸಕರನ್ನು ಈ ಹಿಂದೆ ಇದ್ದಂತೆ ಸಮೀಪದ ಸರ್ಕಾರಿ ಕಾಲೇಜುಗಳಿಗೆ ನಿಯೋಜಿಸಿದರೆ ಉಪನ್ಯಾಸಕರಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರಕ್ಕೂ ಆರ್ಥಿಕ ಹೊರೆ ಆಗುವುದಿಲ್ಲ’ ಎಂದರು.</p>.<p>ಜಿಲ್ಲಾ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಪದಾಧಿಕಾರಿ ಮಾಲೇಟಿರ ರಶ್ಮಿ, ಅನುದಾನಿತ ಕಾಲೇಜಿನ ಉಪನ್ಯಾಸಕರ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.</p>.<p>ಮನವಿ ಸ್ವೀಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ, ಈ ಕುರಿತು ಸಚಿವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂಘದ ಪದಾಧಿಕಾರಿಗಳಾದ ಜೋಮನ್ ಥೋಮಸ್, ನೋಹ ವಿವೇಕ್, ನಾಚಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಅನುದಾನಿತ ಕಾಲೇಜುಗಳ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಸೋಮವಾರ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಖಜಾಂಚಿ ಎ.ಎನ್.ಹೇಮಂತ್ ಕುಮಾರ್, ‘ಕಾರ್ಯಭಾರದ ಕೊರತೆಯಿರುವ ಅನುದಾನಿತ ಕಾಲೇಜುಗಳ ಉಪನ್ಯಾಸಕರನ್ನು ಕಾರ್ಯಭಾರ ಹೊಂದಿರುವ ಕಾಲೇಜುಗಳಿಗೆ ನಿಯೋಜಿಸಲಾಗುತ್ತಿದೆ. ಇದರಿಂದ ಕೆಲ ಉಪನ್ಯಾಸಕರು ವಾರದ 3 ದಿನಗಳು ಸಾಕಷ್ಟು ದೂರದ ಊರುಗಳಲ್ಲಿನ ಅನುದಾನಿತ ಕಾಲೇಜಿಗೆ ತೆರಳಿ ಕಾರ್ಯನಿರ್ವಹಿಸುವಂತಾಗಿದೆ. ಕೆಲ ಉಪನ್ಯಾಸಕರಿಗೆ ನಿಯೋಜನೆ ಸ್ಥಳಾವಕಾಶವು ಇಲ್ಲವಾಗಿದೆ. ಆದ್ದರಿಂದ ನಿಗದಿತ ಕಾರ್ಯಭಾರವಿಲ್ಲದ ಉಪನ್ಯಾಸಕರನ್ನು ಈ ಹಿಂದೆ ಇದ್ದಂತೆ ಸಮೀಪದ ಸರ್ಕಾರಿ ಕಾಲೇಜುಗಳಿಗೆ ನಿಯೋಜಿಸಿದರೆ ಉಪನ್ಯಾಸಕರಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರಕ್ಕೂ ಆರ್ಥಿಕ ಹೊರೆ ಆಗುವುದಿಲ್ಲ’ ಎಂದರು.</p>.<p>ಜಿಲ್ಲಾ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಪದಾಧಿಕಾರಿ ಮಾಲೇಟಿರ ರಶ್ಮಿ, ಅನುದಾನಿತ ಕಾಲೇಜಿನ ಉಪನ್ಯಾಸಕರ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.</p>.<p>ಮನವಿ ಸ್ವೀಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ, ಈ ಕುರಿತು ಸಚಿವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂಘದ ಪದಾಧಿಕಾರಿಗಳಾದ ಜೋಮನ್ ಥೋಮಸ್, ನೋಹ ವಿವೇಕ್, ನಾಚಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>